ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ವರಿಷ್ಠರು ನೇಮಕ ಮಾಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಶಾಸಕಿಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಂತ ಶಾರದ ಪೂರ್ಯಾನಾಯಕ್ ಅವರಿಗೆ ಈಗ ಅದೃಷ್ಠ ಖುಲಾಯಿಸಿದೆ. ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರಾಗಿ ಕುಮಾರಸ್ವಾಮಿ, ಉಪ ನಾಯಕರಾಗಿ ಶಾರದಾ ಪೂರ್ಯಾನಾಯಕ್ ನೇಮಕ ಮಾಡಲಾಗಿದೆ.
ಇನ್ನೂ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ ನೇಮಕ ಮಾಡಿದ್ದು, ದಲಿತ ಮಹಿಳಾ ಶಾಸಕಿಗೆ ಜೆಡಿಎಸ್ ಪಕ್ಷ ಕೊಟ್ಟ ಸದುದ್ದೇಶದ ಆದೇಶವಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ಬಿಜೆಪಿ ಪಕ್ಷದಿಂದ ವಿಪಕ್ಷ ನಾಯಕನ ಸೇರಿದಂತೆ ವಿಧಾನಸಭೆ, ಪರಿಷತ್ ನಾಯಕನ ಆಯ್ಕೆ ಕೂಡ ಮಾಡಿಲ್ಲ. ಈ ಸಂಬಂಧ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗಧಿಯಾಗಿದೆ. ಈ ಸಭೆಯಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಇದಕ್ಕೂ ಮುಂಚೆಯೇ ಜೆಡಿಎಸ್ ಪಕ್ಷದಿಂದ ವಿಧಾನಸಭೆಯ ನಾಯಕರನ್ನಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾರದ ಪೂರ್ಯಾ ನಾಯ್ಕ್ ಆಯ್ಕೆ ಮಾಡಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್