ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident
ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…