ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹಾಗೂ 9ನೇ ರ‌್ಯಾಂಕ್ ಪಡೆದ JNNC ವಿದ್ಯಾರ್ಥಿನಿಯರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‌್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ಆರ್ ಎಂ ಮಂಜುನಾಥ್ ಗೌಡ ಹಿಡಿತಕ್ಕೆ ಡಿಸಿಸಿ ಬ್ಯಾಂಕ್ – ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಪ್ರಭಾರ ಅಧ್ಯಕ್ಷರಾಗಿ ಆಯ್ಕೆ..!!!|DCC

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಆಗಿದ್ದು, 9 ನಿರ್ದೇಶಕರ ಬೆಂಬಲದೊಂದಿಗೆ ಮತ್ತೆ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಡಾ. ಆರ್.ಎಂ. ಮಂಜುನಾಥ ಗೌಡ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪರವಾಗಿ 9 ಮತಗಳೊಂದಿಗೆ, ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿದೆ. ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 13 ಸದಸ್ಯರಿದ್ದು ಈಗ ಗೌಡರ ಪಾಳಯ ಅಧಿಕಾರ ಹಿಡಿದಿದೆ. ಚುನಾವಣೆ ಅಧಿಕಾರಿಯಾಗಿ ಜೆಸಿ ವೆಂಕಟಾಚಲಪತಿ ನೇತೃತ್ವದಲ್ಲಿ ಗೌಪ್ಯ…

Read More

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭ, ಎಷ್ಟಿದೆ ದರ? ಬುಕ್‌ ಮಾಡುವುದು ಹೇಗೆ?|Airport

ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್‌ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್‌ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್‌ ಸ್ಟಾಪ್‌ ಫ್ಲೈಟ್‌ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್‌ ಮಾದರಿ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸ್ ಕಂಡಕ್ಟರ್..!!bus conductor

ತೀರ್ಥಹಳ್ಳಿ : ಪಟ್ಟಣದ ತುಂಗಾ ಸೇತುವೆ ಸಮೀಪದ ಸರ್ಕಾರಿ ಕಚೇರಿಯ ಹೊರ ಭಾಗದಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ನಾಗರಾಜ್(56) ಎಂದು ಗುರುತಿಸಲಾಗಿದೆ. ಕಮ್ಮರಡಿ ಮೂಲದವರು ಎಂಬುದಾಗಿ ತಿಳಿದು ಬಂದಿದ್ದು, ನಾಗರಾಜು ಅವರು  ಎನ್ ಆರ್ ಪುರ  ಭಾಗದಲ್ಲಿ ಖಾಸಗಿ ಬಸ್ ಕಂಡಕ್ಟರ್ ಆಗಿ  ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಶಾಸಕ ಬೇಳೂರು ಗೋಪಾಲಕೃಷ್ಣ. ರಿಪ್ಪನ್ ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ  ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಘಟನೆ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅತಿವೃಷ್ಟಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವುದರ ಸಲುವಾಗಿ ಸಚಿವರು ಬರುವುದಕ್ಕಿಂತ ಮುಂಚಿತವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದರು.ಈ…

Read More

ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ

ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…

Read More

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ  ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ.   ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ  ಸುರಿಯುತ್ತಿರುವ  ಮಳೆ- ಗಾಳಿಯಿಂದ  ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಹಾನಿಗೊಳಗಾದ ನಷ್ಟದ ಕುರಿತು  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.  ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು  ಆಯೋಜಿಸಿದ್ದ  ಸಭೆಯಲ್ಲಿ  ಅವರು ಮಾತನಾಡಿ, ಮಳೆಯಿಂದ…

Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More