ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ.   ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ….

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಮೇಲ್ಚಾವಣಿ ಕುಸಿತ | ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಕಲ್ಯಾಣಪುರದಲ್ಲಿ ಮನೆಯೊಂದರ ಗೋಡೆ ಹಾಗೂ ಮೇಲ್ಚಾವಣಿ ಕುಸಿತವಾಗಿರುವ ಘಟನೆ ನಡೆದಿದೆ. ಇಂದು ಸುರಿದ ಭಾರಿ ಮಳೆಗೆ ಕಲ್ಯಾಣಪುರ ಗ್ರಾಮದ ಕೃಷ್ಣ ಹೆಗಡೆ  ಎಂಬುವವರ ಮನೆಯ ಹಿಂಬದಿಯ ಗೋಡೆ ಹಾಗೂ‌ ಮೇಲ್ಚಾವಣಿ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ…

Read More

ರಿಪ್ಪನ್‌ಪೇಟೆಯಲ್ಲಿ ಇನ್ನು ಮುಂದೆ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ|Rpet

ರಿಪ್ಪನ್‌ಪೇಟೆಯಲ್ಲಿ ಇನ್ನೂ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ’’ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಮುಂಗಡ ಹಣ ನೀಡಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ವ್ಯವಸ್ಥಾಪನಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಂಸ್ಥೆ ಭಕ್ತಾಧಿಗಳ ಬಹು ದಿನಗಳ ಬೇಡಿಕೆಯಂತೆ ಈ…

Read More

ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ |beluru

ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ    ಹರತಾಳುವಿನಲ್ಲಿ ಗ್ರಾಮಸ್ಥರ ಬಹುವರ್ಷದ ಬೇಡಿಕೆಯನ್ನು ಈಡೇರಿಸಿದ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಆ ನಿಟ್ಟಿನಲ್ಲಿ ಬಟ್ಟೆಮಲ್ಲಪ್ಪ – ರಿಪ್ಪನ್‌ಪೇಟೆ ಗೆ ಕೆ ಎಸ್ ಆರ್ ಟಿಸಿ ಬಸ್ ಸೌಲಭ್ಯ ಕಲ್ಪಿಸಿದ್ದೇನೆ ಎಂದು  ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪನವರ ಸ್ವಗ್ರಾಮದ ಗ್ರಾಮಸ್ಥರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ  ದೂರದ ರಿಪ್ಪನ್‌ಪೇಟೆ ಆನಂದಪುರ…

Read More

ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ|train

ಶಿವಮೊಗ್ಗ : ಇಲ್ಲಿನ ವಿನೋಬ ನಗರದ  2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ (70)  ಮೃತ ದುರ್ದೈವಿ. ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಮೊನ್ನೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ….

Read More

ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ  ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ…

Read More

ಆನಂದಪುರ – ಆಯನೂರು ಹೆದ್ದಾರಿಗೆ ಅಡ್ದಲಾಗಿ ಬಿದ್ದ ಮರ – ಟ್ರಾಫಿಕ್ ಜಾಮ್| ಸಮಯ ಪ್ರಜ್ಞೆ ಮೆರೆದ ಶಾಸಕ ಬೇಳೂರು|rain

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. ಆದರೆ ದೊಡ್ಡದಾಗಿದ್ದ ಮರವನ್ನು ತೆರವುಗೊಳಿಸುವುದು ಸುಲಭದ ಕೆಲಸವಾಗಿರಲಿಲ್ಲ.  ಗಿಳಾಲಗುಂಡಿ ಕ್ರಾಸ್ ಸಮೀಪವೇ ಘಟನೆ ಬಗ್ಗೆ ವಿಷಯ ತಿಳಿದು…

Read More

ರಿಪ್ಪನ್‌ಪೇಟೆ : ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ|labour

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮದಲ್ಲಿ ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಸೋಮವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ‌ ನೂತನ ಸಂಘವನ್ನು ರಚನೆ ಮಾಡಿ ಸಂಘದ ಅಧ್ಯಕ್ಷರನ್ನಾಗಿ ಮಹಮ್ಮದ್ ಹುಸೇನ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ :  ಅಧ್ಯಕ್ಷರು : ಮಹಮ್ಮದ್ ಹುಸೇನ್  ಉಪಾಧ್ಯಕ್ಷರು : ದೇವೇಂದ್ರ ಆಚಾರ್ ಮತ್ತು ಶೌಕತ್ ಗೌರವಾಧ್ಯಕ್ಷರು : ರಮೇಶ್ ಆರ್ ಕಾರ್ಯಾಧ್ಯಕ್ಷರು : ಪ್ರಭಾಕರ್ ಆಚಾರ್…

Read More