ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ
ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥಗೌಡ ಹರಿಹಾಯ್ದರು.

ಬುಧವಾರ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಆರಗ ಜ್ಞಾನೇಂದ್ರ ಅವರು ಈ ಮಟ್ಟಿಗೆ ಇಳಿಯುತ್ತಾರೆ ಎಂದು ಅಂದುಕೊಂಡಿರಲಿಲ್ಲ.ವರ್ಣಭೇದವನ್ನು ಮಾಡಿ  ಸಂವಿಧಾನದ ವಿರೋಧಿ ಹೇಳಿಕೆಯನ್ನ ನೀಡಿರುವುದು ಸರಿಯಲ್ಲ ಈ ಮನಸ್ಥಿತಿಗೆ ಏನೆಂದು ಹೇಳಬೇಕು ಗೊತ್ತಾಗುತ್ತಿಲ್ಲ. ಇವರೇನು ಸಣ್ಣ ಹುಡುಗರಲ್ಲ. ಸುಮಾರು 40 ರಿಂದ 50 ವರ್ಷಗಳ ಕಾಲ ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವ ಇದ್ದು ಎತ್ತರದ ಸ್ಥಾನವನ್ನು ಕಂಡವರು. ಇದು ತೀರ್ಥಹಳ್ಳಿ ಕ್ಷೇತ್ರದ ಜನರಿಗೆ ಮಾಡಿದ ಅಪಚಾರ ಎಂದರು.

ಆರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆಗೆ ಬಿಜೆಪಿಯವರು ಉತ್ತರ ನೀಡಬೇಕಿದೆ. ಪೊಲೀಸ್ ಇಲಾಖೆಯವರು  ಸುಮೋಟೋ ಕೇಸ್ ದಾಖಲಿಸಿ ಅವರ ಮೇಲೆ ಕಾನೂನು ಮತ್ತು ಸಂವಿಧಾನದ ವಿರೋಧಿ ಹೇಳಿಕೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬೇಕು. ಸೋನಿಯಾ ಗಾಂಧಿ,  ರಾಹುಲ್ ಗಾಂಧಿ ಏನಾದರೂ ಮಾತನಾಡಿದರೆ ಪ್ರಕರಣವನ್ನ ದಾಖಲಿಸುತ್ತಾರೆ. ಸದಸ್ಯತ್ವವನ್ನು ಅನರ್ಹ ಮಾಡಿಸುತ್ತಾರೆ. ಕಾಂಗ್ರೆಸ್ ಪಕ್ಷದವರು ಮಾಡಿದರೆ ಮಾತ್ರ ಅಪರಾಧವಾ? ಜ್ಞಾನೇಂದ್ರ ಅವರು ಮಾಡಿದಂತಹ ವರ್ಣ ಭೇಧವನ್ನು ನೋಡಿದರೆ ದಕ್ಷಿಣ ಆಫ್ರಿಕದಲ್ಲಿ ನಡೆದ ಘಟನೆ ನೆನಪಾಗುತ್ತದೆ ಎಂದರು.

ಆರಗ ಜ್ಞಾನೇಂದ್ರ ಅವರು ಇನ್ನು ಗೃಹ ಸಚಿವರಾಗಿದ್ದೇನೆ ಎಂಬ ಅಧಿಕಾರದ ಭ್ರಮೆಯಲ್ಲಿದ್ದಾರಾ?  ಕಸ್ತೂರಿ ರಂಗನ್ ವರದಿ ವಿರುದ್ಧ ಈಗ ಪ್ರತಿಭಟನೆ ನಡೆಸಿದ್ದಾರೆ. ಇಷ್ಟು ವರ್ಷಗಳ ಕಾಲ ಇವರದ್ದೇ ಆದ ಸರ್ಕಾರ ಇತ್ತು. ಆಗ ಯಾವುದೇ ರೀತಿಯಲ್ಲಿ ಪ್ರತಿಭಟನೆ ಮಾಡದೆ ನಮ್ಮ ಸರ್ಕಾರ ಬರುವ ಒಳಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಜ್ಞಾನೇಂದ್ರ ಅವರು ಮಾಡಿರುವುದು ಜಾತಿನಿಂದನೆ ಹಾಗೂ ವರ್ಣ ಭೇದ ನಿಂದನೆ. ಇದೊಂದು ದುರಂತ ಹಾಗಾಗಿ ಆ ಮಾತು ಕ್ಷಮೆ ಕೇಳುವುದರಿಂದ ಅಥವಾ ಮಾತನ್ನ ವಾಪಸ್ ಪಡೆಯುವುದರಿಂದ ಈ ಪ್ರಕರಣ ಮುಚ್ಚಿ ಹೋಗುವುದಿಲ್ಲ. ಆರಗ ಜ್ಞಾನೇಂದ್ರರ ಮೇಲೆ ಏನು ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿಯವರು ಉತ್ತರ ನೀಡಬೇಕು ಎಂದರು.
ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಒಪ್ಪಿಕೊಂಡಿದ್ದೆ ಕೇಂದ್ರ ಸರ್ಕಾರ, ಬಿಜೆಪಿಯವರದ್ದೇ ಸರ್ಕಾರ, ಅದರ ವಿರುದ್ಧವಾಗಿ ನಾವು ಹೋರಾಟ ಮಾಡಿದ್ದೇವೆ. ವಾರದ ಹಿಂದೆ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಆದರೆ ಆ ಸಭೆಗೆ ಆರಗ ಜ್ಞಾನೇಂದ್ರ ಹೋಗಿರಲಿಲ್ಲ. ಆದರೆ ಈಗ ಕಸ್ತೂರಿ ರಂಗನ್ ವರದಿಯ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಯಾವಾಗಲೂ ಕಸ್ತೂರಿ ರಂಗನ್ ವರದಿಯ ವಿರುದ್ಧವಾಗಿ ಇರುತ್ತದೆ, ಕೇಂದ್ರ ಸರ್ಕಾರಗಳು ಕಸ್ತೂರಿ ರಂಗನ್ ವರದಿಯ ಪರವಾಗಿದೆ. ನನ್ನ ಮೇಲೆ ಕೇಸ್ ದಾಖಲಿಸಿದರು ಪರವಾಗಿಲ್ಲ ಈ ಮಾತು ಸತ್ಯ ಎಂದರು.

ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿದ್ದ ರಕ್ತ ಕ್ರಾಂತಿ ವಿಚಾರವಾಗಿ ಮಾತನಾಡಿ ಅವರ ಪಕ್ಷ ಅಧಿಕಾರಕ್ಕೆ ಬಂದಿದ್ದೆ ಆ ರೀತಿಯಿಂದ, ರೈತರಿಗೆ ಅವರ ಸರ್ಕಾರ ಏನು ಮಾಡಿದೆ? ಇವರು ಬಹಳ ಬಡತನದಲ್ಲಿ ಬಂದಿದ್ದಾರಲ್ವಾ?  ಗುಮ್ಮಿ ನೀರು ಕುಡಿದು ಬಂದಿದ್ದೇನೆ ಎಂದು ಹೇಳುವವರು ಮಂತ್ರಿಯಾದ ಮೇಲೆ ಅವರ ಮಾತು ಬದಲಾಗಿದೆ. ಅವರ ರಾಜೀನಾಮೆಯನ್ನು ನಾವು ಕೇಳುವುದಿಲ್ಲ ಬಿಜೆಪಿಯವರೇ ರಾಜೀನಾಮೆ ಕೊಡಿ ಎಂದು ಹೇಳಬೇಕು ಎಂದು ಒತ್ತಾಯಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

6 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago