ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ
ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥಗೌಡ ಹರಿಹಾಯ್ದರು.

ಬುಧವಾರ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಆರಗ ಜ್ಞಾನೇಂದ್ರ ಅವರು ಈ ಮಟ್ಟಿಗೆ ಇಳಿಯುತ್ತಾರೆ ಎಂದು ಅಂದುಕೊಂಡಿರಲಿಲ್ಲ.ವರ್ಣಭೇದವನ್ನು ಮಾಡಿ  ಸಂವಿಧಾನದ ವಿರೋಧಿ ಹೇಳಿಕೆಯನ್ನ ನೀಡಿರುವುದು ಸರಿಯಲ್ಲ ಈ ಮನಸ್ಥಿತಿಗೆ ಏನೆಂದು ಹೇಳಬೇಕು ಗೊತ್ತಾಗುತ್ತಿಲ್ಲ. ಇವರೇನು ಸಣ್ಣ ಹುಡುಗರಲ್ಲ. ಸುಮಾರು 40 ರಿಂದ 50 ವರ್ಷಗಳ ಕಾಲ ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವ ಇದ್ದು ಎತ್ತರದ ಸ್ಥಾನವನ್ನು ಕಂಡವರು. ಇದು ತೀರ್ಥಹಳ್ಳಿ ಕ್ಷೇತ್ರದ ಜನರಿಗೆ ಮಾಡಿದ ಅಪಚಾರ ಎಂದರು.

ಆರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆಗೆ ಬಿಜೆಪಿಯವರು ಉತ್ತರ ನೀಡಬೇಕಿದೆ. ಪೊಲೀಸ್ ಇಲಾಖೆಯವರು  ಸುಮೋಟೋ ಕೇಸ್ ದಾಖಲಿಸಿ ಅವರ ಮೇಲೆ ಕಾನೂನು ಮತ್ತು ಸಂವಿಧಾನದ ವಿರೋಧಿ ಹೇಳಿಕೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬೇಕು. ಸೋನಿಯಾ ಗಾಂಧಿ,  ರಾಹುಲ್ ಗಾಂಧಿ ಏನಾದರೂ ಮಾತನಾಡಿದರೆ ಪ್ರಕರಣವನ್ನ ದಾಖಲಿಸುತ್ತಾರೆ. ಸದಸ್ಯತ್ವವನ್ನು ಅನರ್ಹ ಮಾಡಿಸುತ್ತಾರೆ. ಕಾಂಗ್ರೆಸ್ ಪಕ್ಷದವರು ಮಾಡಿದರೆ ಮಾತ್ರ ಅಪರಾಧವಾ? ಜ್ಞಾನೇಂದ್ರ ಅವರು ಮಾಡಿದಂತಹ ವರ್ಣ ಭೇಧವನ್ನು ನೋಡಿದರೆ ದಕ್ಷಿಣ ಆಫ್ರಿಕದಲ್ಲಿ ನಡೆದ ಘಟನೆ ನೆನಪಾಗುತ್ತದೆ ಎಂದರು.

ಆರಗ ಜ್ಞಾನೇಂದ್ರ ಅವರು ಇನ್ನು ಗೃಹ ಸಚಿವರಾಗಿದ್ದೇನೆ ಎಂಬ ಅಧಿಕಾರದ ಭ್ರಮೆಯಲ್ಲಿದ್ದಾರಾ?  ಕಸ್ತೂರಿ ರಂಗನ್ ವರದಿ ವಿರುದ್ಧ ಈಗ ಪ್ರತಿಭಟನೆ ನಡೆಸಿದ್ದಾರೆ. ಇಷ್ಟು ವರ್ಷಗಳ ಕಾಲ ಇವರದ್ದೇ ಆದ ಸರ್ಕಾರ ಇತ್ತು. ಆಗ ಯಾವುದೇ ರೀತಿಯಲ್ಲಿ ಪ್ರತಿಭಟನೆ ಮಾಡದೆ ನಮ್ಮ ಸರ್ಕಾರ ಬರುವ ಒಳಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಜ್ಞಾನೇಂದ್ರ ಅವರು ಮಾಡಿರುವುದು ಜಾತಿನಿಂದನೆ ಹಾಗೂ ವರ್ಣ ಭೇದ ನಿಂದನೆ. ಇದೊಂದು ದುರಂತ ಹಾಗಾಗಿ ಆ ಮಾತು ಕ್ಷಮೆ ಕೇಳುವುದರಿಂದ ಅಥವಾ ಮಾತನ್ನ ವಾಪಸ್ ಪಡೆಯುವುದರಿಂದ ಈ ಪ್ರಕರಣ ಮುಚ್ಚಿ ಹೋಗುವುದಿಲ್ಲ. ಆರಗ ಜ್ಞಾನೇಂದ್ರರ ಮೇಲೆ ಏನು ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿಯವರು ಉತ್ತರ ನೀಡಬೇಕು ಎಂದರು.
ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಒಪ್ಪಿಕೊಂಡಿದ್ದೆ ಕೇಂದ್ರ ಸರ್ಕಾರ, ಬಿಜೆಪಿಯವರದ್ದೇ ಸರ್ಕಾರ, ಅದರ ವಿರುದ್ಧವಾಗಿ ನಾವು ಹೋರಾಟ ಮಾಡಿದ್ದೇವೆ. ವಾರದ ಹಿಂದೆ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಆದರೆ ಆ ಸಭೆಗೆ ಆರಗ ಜ್ಞಾನೇಂದ್ರ ಹೋಗಿರಲಿಲ್ಲ. ಆದರೆ ಈಗ ಕಸ್ತೂರಿ ರಂಗನ್ ವರದಿಯ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಯಾವಾಗಲೂ ಕಸ್ತೂರಿ ರಂಗನ್ ವರದಿಯ ವಿರುದ್ಧವಾಗಿ ಇರುತ್ತದೆ, ಕೇಂದ್ರ ಸರ್ಕಾರಗಳು ಕಸ್ತೂರಿ ರಂಗನ್ ವರದಿಯ ಪರವಾಗಿದೆ. ನನ್ನ ಮೇಲೆ ಕೇಸ್ ದಾಖಲಿಸಿದರು ಪರವಾಗಿಲ್ಲ ಈ ಮಾತು ಸತ್ಯ ಎಂದರು.

ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿದ್ದ ರಕ್ತ ಕ್ರಾಂತಿ ವಿಚಾರವಾಗಿ ಮಾತನಾಡಿ ಅವರ ಪಕ್ಷ ಅಧಿಕಾರಕ್ಕೆ ಬಂದಿದ್ದೆ ಆ ರೀತಿಯಿಂದ, ರೈತರಿಗೆ ಅವರ ಸರ್ಕಾರ ಏನು ಮಾಡಿದೆ? ಇವರು ಬಹಳ ಬಡತನದಲ್ಲಿ ಬಂದಿದ್ದಾರಲ್ವಾ?  ಗುಮ್ಮಿ ನೀರು ಕುಡಿದು ಬಂದಿದ್ದೇನೆ ಎಂದು ಹೇಳುವವರು ಮಂತ್ರಿಯಾದ ಮೇಲೆ ಅವರ ಮಾತು ಬದಲಾಗಿದೆ. ಅವರ ರಾಜೀನಾಮೆಯನ್ನು ನಾವು ಕೇಳುವುದಿಲ್ಲ ಬಿಜೆಪಿಯವರೇ ರಾಜೀನಾಮೆ ಕೊಡಿ ಎಂದು ಹೇಳಬೇಕು ಎಂದು ಒತ್ತಾಯಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

10 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

14 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

16 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

19 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

19 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago