ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?


ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?


ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.  

 ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಮಿಥುನ್​ ಕುಮಾರ್,  ನಗರದಲ್ಲಿರುವ ಸರ್ಕಲ್​ಗಳಲ್ಲಿ ಕ್ಯಾಮರಾಗಳನ್ನ ಅಳವಡಿಸಲಾಗಿದ್ದು, ಅದರಲ್ಲಿನ ದೃಶ್ಯಗಳು ಕೇಂದ್ರೀಕೃತ ಕಂಬೈಂಡ್ ಅಂಡ್ ಕಂಟ್ರೋಲ್‌ ಸೆಂಟರ್‌ಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದ್ದು ಸಂಚಾರಿ ನಿಯಮಗಳ ಉಲ್ಲಂಘನೆಯ ಮೇಲೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ. 



ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರೂ ಅದು ಕ್ಯಾಮರಾ ಮೂಲಕ ಕ್ಯಾಪ್ಚರ್ ಆಗುತ್ತದೆ.  ಸಿಗ್ನಲ್‌ ಜಂಪ್ ಮಾಡಿದಾಗ ವಾಹನದ ಫೋಟೊ ಮತ್ತು ವೀಡಿಯೋ ತುಣುಕನ್ನು ಎಸ್‌ಎಡಿ ಕ್ಯಾಮೆರಾಗಳು ಸೆರೆಹಿಡಿಯುತ್ತವೆ. ಇದಲ್ಲದೆ ಹೆಲೈಟ್ ಧರಿಸದೆ ಇದ್ದರೆ, ಮೂವರು ಕುಳಿತು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರೆ, ಮೊಬೈಲ್‌ನಲ್ಲಿ ಮಾತ ನಾಡುತ್ತಾ ವಾಹನ ಚಲಾಯಿಸುತ್ತಿದ್ದರೆ, ಒನ್‌, ನೋ ಎಂಟ್ರಿ, ನೋ ಪಾರ್ಕಿಂಗ್‌, ಕಾರಿನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳು ವುದು, ಹೀಗೆ ಯಾವುದೇ ರೀತಿಯ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ತಕ್ಷಣವೇ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮತ್ತು ಮಾಲೀಕರ ವಿಳಾಸಕ್ಕೆ ಅಂಚೆ ಮೂಲಕ ನೋಟೀಸ್ ಕಳಿಸಲಾಗುತ್ತದೆ ಎಂದರು. 




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

6 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago