ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್ಆರ್ಟಿಸಿ ಬಸ್ಗೆ ಸೈಡ್ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ.
ಸಾಗರ-ಶಿವಮೂಗ್ಗ ರೂಟ್ನಲ್ಲಿ KSRTC ಹಾಗೂ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಸೀಟ್ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ನ್ನ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಬಸ್ನ ಹಿಂಬದಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿದೆ.
ಒಂದೇ ರೂಟ್ನಲ್ಲಿ, ಹೆಚ್ಚು ಕಮ್ಮಿ ಒಂದೇ ಸಮಯದಲ್ಲಿ, ಹಿಂದೆ ಮುಂದೆ ಬರುವ ಬಸ್ಗಳ ನಡುವೆ ಪ್ಯಾಸೆಂಜರ್ಗಳನ್ನು ಹತ್ತಿಸಿಕೊಳ್ಳುವುದಕ್ಕೆ ಬಸ್ಗಳ ನಡುವೆ ಸ್ಪರ್ಧೆ ಏರ್ಪಟ್ಟಿರುತ್ತದೆ. ಇವತ್ತು ಇದೇ ರೀತಿಯಲ್ಲಿ ಪ್ಯಾಸೆಂಜರ್ಗಳನ್ನು ತಮ್ಮ ಬಸ್ಗೆ ಹತ್ತಿಸಿಕೊಳ್ಳಬೇಕು ಎನ್ನುವ ಅವಸರದಲ್ಲಿ ಈ ಆಕ್ಸಿಡೆಂಟ್ ಸಂಭವಿಸಿದೆ.
. ಇನ್ನೂ ಘಟನೆಯಿಂದಾಗಿ ಎರಡು ಬಸ್ನಲ್ಲಿದ್ದ ಪ್ರಯಾಣಿಕರು ರಸ್ತೆಯಲ್ಲಿಯೇ ನಿಲ್ಲಬೇಕಾದ ಪ್ರಸಂಗ ಎದುರಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್