ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ

ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ ಪ್ರಸಂಗ ನಡೆದಿದೆ.

13 ಸದಸ್ಯರಿರುವ ಗ್ರಾಪಂನಲ್ಲಿ 8ಜನ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 5 ಜನ ಕಾಂಗ್ರೆಸ್ ಸದಸ್ಯರಿದ್ದರು. ಬುಧವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಭಾವತಿ ಲೋಕೇಶ್ 7 ಮತ ಪಡೆದರು. 8 ಜನ ಬಿಜೆಪಿ ಸದಸ್ಯರು ಇದ್ದರೂ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಮೀನಾಕ್ಷಿ ಲಿಂಗಪ್ಪ ಕೇವಲ ಆರು ಮತ ಪಡೆದು ಮುಖಭಂಗಕ್ಕೊಳಗಾದರು.

ಕಳೆದ ಅವಧಿಯಲ್ಲಿ ಬಿಜೆಪಿಯ 8 ಜನ ಸದಸ್ಯರು ಒಟ್ಟಾಗಿ ಅಧಿಕಾರ ಹಂಚಿಕೆ ಮಾಡಿಕೊಳ್ಳಲು ದೇವರಲ್ಲಿ ಆಣೆ ಪ್ರಮಾಣ ಮಾಡಿಕೊಂಡಿದ್ದರು. ಈ ಬಾರಿಯೂ ದೇವಸ್ಥಾನದಲ್ಲಿ ನಡೆದ ಅಧಿಕಾರ ಹಂಚಿಕೆ ಒಪ್ಪಂದದ ತೀರ್ಮಾನದಂತೆ ಒಟ್ಟಾಗಿ ಚುನಾವಣೆಯಲ್ಲಿ ಮೀನಾಕ್ಷಿಯವರನ್ನು ಬೆಂಬಲಿಸಬೇಕು, ಒಗ್ಗಟ್ಟಿಗೆ ಮುಕ್ಕಾಗಬಾರದು ಎಂದು ತೀರ್ಮಾನಿಸಿ ಮಂಗಳವಾರ ರಾತ್ರಿ ಶಿವಮೊಗ್ಗ ಲಾಡ್ಜ್ ಒಂದರಲ್ಲಿ ತಂಗಿದ್ದರು. ಬುಧವಾರ ಬೆಳಿಗ್ಗೆ ವಾಹನದ ಮೂಲಕ ನೇರವಾಗಿ ಆಗಮಿಸಿದ ಸದಸ್ಯರು ಮತದಾನ ಮಾಡಿದ್ದರು. ಆದರೆ ಚುನಾವಣಾ ಫಲಿತಾಂಶ ಪ್ರಕಟವಾದಾಗ ಘೋಷಿತವಾದ ಮೀನಾಕ್ಷಿಯವರ ಸೋಲು ಬಿಜೆಪಿಗೆ ಶಾಕ್ ತಂದಿತ್ತು.

ತಕ್ಷಣ ಗೊಂದಲಗಳಾಗಿ, ಯಾರು ಇಬ್ಬರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಜಿಜ್ಞಾಸೆ ಕಾಡಿದ್ದರಿಂದ ಆ ಇಬ್ಬರು ಸದಸ್ಯರು ಯಾರು ಎಂದು ಖಚಿತಪಡಿಸಿಕೊಳ್ಳುವ ಪ್ರಯತ್ನವಾಗಿ ಬಿಜೆಪಿ ಗುಂಪು ಬಂದಿಳಿದ ವಾಹನವನ್ನೇ ಏರಿ ಹಿಂದಿನ ಬಾರಿ ಅಧಿಕಾರ ಹಂಚಿಕೆಯ ವೇಳೆ ಒಡಂಬಡಿಕೆ ಮಾಡಿಕೊಂಡಿದ್ದ ದೇವಸ್ಥಾನಕ್ಕೆ ತೆರಳಿದೆ. ಈ ವೇಳೆ ಎಲ್ಲಾ 8 ಜನ ಸದಸ್ಯರು ಮೀನಾಕ್ಷಿಯವರಿಗೇ ಮತ ಹಾಕಿದ್ದೇವೆ ಎಂದು ಪ್ರಮಾಣ ಮಾಡಿದ್ದಾರೆ. ಈಗ ಯಾರು ಮೋಸ ಮಾಡಿದ್ದಾರೆ ಎನ್ನುವುದೇ ಯಕ್ಷಪ್ರಶ್ನೆಯಾಗಿ ಬಿಜೆಪಿಗೆ ತೀವ್ರ ಗೊಂದಲ ಉಂಟಾಗಿದೆ.

ಉಪಾಧ್ಯಕ್ಷರಾಗಿ ರೇಣುಕಾ ಸುರೇಶ್ ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾದ ಎಚ್. ಗಿರೀಶ್, ಇಸಾಕ್, ಹನುಮಂತ, ಮರಾಠಿ ಪರಶುರಾಮ್, ಗೀತಾ, ಯಶೋಧಾ, ರೇವಪ್ಪ, ಚೈತ್ರಾ ಟಾಕಪ್ಪ, ಉಷಾ, ಮಧು, ಸುಭಾಷ್ ಚಂದ್ರ ಮತದಾನದಲ್ಲಿ ಪಾಲ್ಗೊಂಡಿದ್ದರು. ಪಿಡಿಒ ಮೋಹನ್ ಇದ್ದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಸನ್ನ ಕುಮಾರ್ ಚುನಾವಣೆ ಪ್ರಕ್ರಿಯೆ ನಡೆಸಿದರು.

ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು:

ಅಧಿಕಾರ ನಡೆಸಲು ಸಂಖ್ಯಾಬಲ ಇಲ್ಲದಿದ್ದರೂ ಚುನಾವಣಾ ತಂತ್ರಗಾರಿಕೆಯಲ್ಲಿ ಯಶಸ್ಸು ಸಾಧಿಸಿದ ಕಾಂಗ್ರೆಸ್ ಕಾರ್ಯಕರ್ತರು ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಸನ್ಮಾನ ನೆರವೇರಿಸಿದರು. ತ್ಯಾಗರ್ತಿಯ ಮಾರಿಕಾಂಬ ದೇವಸ್ಥಾನದ ಬಳಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ತಾಪಂ ಮಾಜಿ ಸದಸ್ಯ ಸೋಮಶೇಖರ್ ಲಾವಿಗ್ಗೆರೆ, ಎಪಿಎಂಸಿ ಮಾಜಿ ಅಧ್ಯಕ್ಷ ಚೇತನ್‌ರಾಜ್ ಕಣ್ಣೂರು, ಟಿ.ಕೆ. ಹನುಮಂತಪ್ಪ, ಕೆ.ಬಿ. ಹೊಳಿಯಪ್ಪ, ನಿಂಗಪ್ಪ ಬೆಳಂದೂರು, ಪ್ರತಾಪ್, ಮಂಜುನಾಥ್ ಬರೂರು, ಖಂಡೋಜಪ್ಪ, ಪುಟ್ಟಪ್ಪ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago