ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ

ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು.

ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಎಲ್. ಶೇಖರಪ್ಪ, ಉಮೇಶ್ ಹಾಗೂ ಜಯಪ್ರಕಾಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ ‘ಬಿ’ ವರ್ಗದ ಏಕಮಾತ್ರ ಸದಸ್ಯರಿರುವ ಕಾರಣ ಕಾಂಗ್ರೆಸ್ ಬೆಂಬಲಿತ ಸದಸ್ಯ ಸುಧಾಕರ್ ನಾಮಪತ್ರ ಸಲ್ಲಿಸಿದ್ದರು.

ಕೊನೆ ಗಳಿಗೆಯಲ್ಲಿ ಜಯಪ್ರಕಾಶ್ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಮೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಶೇಖರಪ್ಪ ಕಣದಲ್ಲಿ ಉಳಿದಿದ್ದು ಮತದಾನದಲ್ಲಿ ಉಮೇಶ್ 8 ಮತ ಪಡೆದರೆ ಶೇಖರಪ್ಪ 5 ಮತ ಪಡೆದರು. 3 ಮತಗಳ ಅಂತರದಿಂದ ಅಧ್ಯಕ್ಷರಾಗಿ ಉಮೇಶ್ ಜಯಭೇರಿ ಬಾರಿಸಿದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಸುಧಾಕರ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಹೊಸನಗರ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸಹಕರಿಸಿದರು.

ಕಳೆದ ಮೊದಲ ಅವಧಿಯಲ್ಲಿ ಗ್ರಾಮಾಡಳಿತದ ಅಧಿಕಾರ ಬಿಜೆಪಿ ಪಾಲಾಗಿದ್ದು ಈಗ ಕಾಂಗ್ರೆಸ್ ತಕ್ಕೆಗೆ ಹೋಗಿದೆ ಇದರಿಂದಾಗಿ ಬಿಜೆಪಿಗೆ ಮುಖಭಂಗವಾದಂತಾಗಿದೆ ಅಲ್ಲದೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚಾ ಹೋಬಳಿಯ ವ್ಯಕ್ತಿ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಕಸಬಾ ಹೋಬಳಿಯ ವ್ಯಕ್ತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಈ ಗ್ರಾಮ ಪಂಚಾಯತಿಯ ವಿಶೇಷವಾಗಿದೆ.


ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್,ತಾ.ಪಂ.ಮಾ.ಸದಸ್ಯ ಬಿ.ಜಿ.ಚಂದ್ರುಮೌಳಿಗೌಡರು,ಕಾಂಗ್ರೇಸ್ ಪಕ್ಷದ ತಾಲ್ಲೂಕ್ ಪ್ರಧಾನಕಾರ್ಯದರ್ಶಿ ಸದಾಶಿವಶ್ರೇಷ್ಟಿ, ವಿ.ಎಸ್.ಎಸ್.ಎನ್.ಅಧ್ಯಕ್ಷ ವೇದಾಂತಪ್ಪ ಗೌಡರು,ಗ್ರಾ.ಪಂ.ಸದಸ್ಯೆ ರೇಖಾ ಮಾಜಿ ಆಧ್ಯಕ್ಷರು ಪಕ್ಷದ ಮುಖಂಡರು ಹಾಜರಿದ್ದರು.



ಕೋಡೂರು ಗ್ರಾಪಂನಲ್ಲಿ ಒಟ್ಟು 13 ಜನ ಸದಸ್ಯರಿದ್ದು ಅದರಲ್ಲಿ 9 ಸದಸ್ಯರು ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದರು.ಕಳೆದ ಅವಧಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗಾದಿಯನ್ನು ಬಿಜೆಪಿ ಅಲಂಕರಿಸಿತ್ತು ಆದರೆ ಎರಡನೇ ಅವಧಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಇದರ ಕಿಂಗ್ ಮೇಕರ್ ಕಾಂಗ್ರೆಸ್ ಮುಖಂಡ ಚಂದ್ರಮೌಳಿ ಗೌಡ ರವರಾಗಿದ್ದು ನಾಲ್ಕು ಜನರಿದ್ದ ಸದಸ್ಯರ ಬಲವನ್ನು ಎಂಟಕ್ಕೇರಿಸುವ ಮೂಲಕ ಕೋಡೂರು ಗ್ರಾಪಂ ಆಡಳಿತವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ದಕ್ಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಾಂಗ್ರೆಸ್ ಮುಖಂಡ ಚಂದ್ರಮೌಳಿ ಗೌಡ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

11 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

15 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

17 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

19 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

20 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago