ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.
ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್ ಪಿ ಮಿಥುನ್ ಕುಮಾರ್ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿದ್ದವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಈ ಆರೋಪಿಗಳು ಈ ದುಷ್ಕೃತ್ಯವನ್ನು ಎಸಗಿದ್ದಾರೆ.
ಪ್ರತಿಮೆ ಧ್ವಂಸ ಮಾಡಿದ ಇಬ್ಬರು ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ ಎಂದು ಎಸ್ ಪಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್