ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ಸಿಗಂದೂರು ದೇವಾಲಯದಲ್ಲಿ ಪೂಜೆ: 

ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ ಸಂಪೂರ್ಣ ಸುರಕ್ಷಿತವಾಗಿ ಲ್ಯಾಂಡ್ ಆಗಲಿ. ಇಸ್ರೋ ವಿಜ್ಞಾನಿಗಳ ಪ್ರಯತ್ನ ಯಶಸ್ವಿಯಾಗಲಿ ಎಂದು ಇಂದು ಬೆಳಗ್ಗೆಯೇ ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಶಿವಮೊಗ್ಗದ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಹೋಮ, ಹವನ ನಡೆಯಿತು. ದೇವಾಲಯದ ಆವರಣದಲ್ಲಿರುವ ಯಾಗಶಾಲೆಯಲ್ಲಿ ನಡೆದ ಹೋಮದಲ್ಲಿ ಆಡಳಿತ ಸಮಿತಿ ಕಾರ್ಯದರ್ಶಿ ರವಿ ಭಾಗಿಯಾಗಿ ನೌಕೆಯು ಯಶಸ್ವಿ ಆಗಲೆಂದು ಪ್ರಾರ್ಥಿಸಿ, ಹೋಮಕ್ಕೆ ಪೂರ್ಣಹುತಿ ನೀಡಿದರು. ದೇವಿ ಚೌಡೇಶ್ವರಿಗೆ ವಿಶೇಷ ಪೊಜೆ ನೆರವೇರಿತು. ದೇವಾಲಯದ ಅರ್ಚಕ ವೃಂದಾ ಹಾಗು ಭಕ್ತರು ಉಪಸ್ಥಿತರಿದ್ದರು.

ಶನೇಶ್ವರ ದೇವಾಲಯದಲ್ಲಿ ಹೋಮ: 

ಶಿವಮೊಗ್ಗದ ವಿನೋಬನಗರದ ಶನೇಶ್ವರ ದೇವಾಲಯದಲ್ಲಿ ವಿಶೇಷ ಹೋಮ ಹಾಗೂ ಪೂಜೆ ನಡೆಯಿತು. ಅರ್ಚಕ ವೃಂದದವರು 108 ಕಾಯಿ ಅಷ್ಠದ್ರವ್ಯ ಮಹಾಗಣಪತಿ ಯಾಗ ಕೈಗೊಂಡರು.

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ವಿಶೇಷ ಪೂಜೆ:

ರಿಪ್ಪನ್ ಪೇಟೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ಧರ್ಮದರ್ಶಿಗಳಾದ ಪ್ರಕಾಶ್ ನೇತೃತ್ವದಲ್ಲಿ ವಿಶೇಷ ಆ ಪೂಜೆ ಕೈಗೊಳ್ಳಲಾಗಿತ್ತು.

ಸಾಗರದ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ:

 ಶಿವಪ್ಪ ನಾಯಕ ವೃತ್ತದಲ್ಲಿರುವ ಹಜರತ್ ಸೈಯದ್ ರಾಜ್ ಬಕ್ಷ್ ವಲಿ ಅಲ್ಲಾಹ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಮಾಜ್ ನಂತರ ದರ್ಗಾದಲ್ಲಿ ಪ್ರಾರ್ಥನೆ ನಡೆಯಿತು. ದರ್ಗಾ ಸಮಿತಿಯ ಅಧ್ಯಕ್ಷ ಅಕ್ಬರ್ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಮೌಲಾನ ಮೊಹಮ್ಮದ್ ಅಶ್ರಫ್ ರಜಾ ಅಶ್ರಫಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಯ್ಯದ್ ನಿಯಾಝ್, ಜಮೀಲ್ ಸಾಗರ್, ಸಮೀವುಲ್ಲಾ, ಅಕ್ರಮ್, ರಶೀದ್, ನಜೀರ್ ಹಾಗೂ ಇನ್ನಿತರರು ಇದ್ದರು.

ದರ್ಗಾ ಸಮಿತಿಯ ಅಧ್ಯಕ್ಷ ಅಕ್ವರ್ ಖಾನ್ ಮಾತನಾಡಿ, “ದರ್ಗಾದಲ್ಲಿ ಚಂದ್ರಯಾನ-3ರ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದ್ದೇವೆ. ಭಾರತದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು. ಭಾರತದ ಚಂದ್ರಯಾನ ನಂಬರ್ ಒನ್ ಆಗಬೇಕೆಂದು ಪ್ರಾರ್ಥನೆ ಮಾಡಿದ್ದೇವೆ” ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

8 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

12 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

14 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

17 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

17 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago