ರಿಪ್ಪನ್ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು.
ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಿಸಿದರು.
ಪುಟ್ಟ ಮಗುವಿನಂಥ ರೋವರ್ನ್ನು ಒಡಲಲ್ಲಿ ಹೊತ್ತ ವಿಕ್ರಮ್ ಲ್ಯಾಂಡರ್ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು.
ಚಂದ್ರಯಾನ 3 ರ ಕೊನೆಯ ಕ್ಷಣಗಳನ್ನು ಉಗುರುಕಚ್ಚುತ್ತಾ ವೀಕ್ಷಿಸುತ್ತಿದ್ದ ಜನರು ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ (Soft Landing) ಮಾಡುತ್ತಿದ್ದಂತೆಯೇ ಒಮ್ಮೆಗೇ ನಿರಾಳರಾಗಿ ಮತ್ತೆ ಹುಚ್ಚೆದ್ದು ಕುಣಿದರು. ಕೆಲವರು ಭಾವುಕರಾದರು, ಕೆಲವರು ಮಕ್ಕಳಂತೆ ಚಪ್ಪಾಳೆ ತಟ್ಟಿದರು. ಒಟ್ಟಿನಲ್ಲಿ ಚಂದ್ರನಲ್ಲಿ ಕಾಲಿಟ್ಟದ್ದು ತಾವೇ ಎಂಬಂತೆ ರಾಷ್ಟ್ರ ಧ್ವಜ ಬೀಸುತ್ತಾ ಮೈಮರೆತರು.
ಇದು ದೇಶದ ಎಲ್ಲೆಡೆ ಕಂಡ ದೃಶ್ಯಾವಳಿ. ಅದರಲ್ಲೂ ಮುಂಜಾನೆಯಿಂದಲೇ ಪೂಜೆ ಪುನಸ್ಕಾರ, ವೀಕ್ಷಣೆಯ ಖುಷಿಯಲ್ಲೇ ದಿನ ಕಳೆದ ಕರ್ನಾಟಕದ ಜನರಂತೂ ಇದನ್ನೊಂದು ಹಬ್ಬದಂತೆ ಸಂಭ್ರಮಿಸಿದರು. ರಾಜ್ಯದ ನಾನಾ ಭಾಗಗಳಲ್ಲಿ ಜನರು ಸಿಹಿ ಹಂಚಿದರು, ನಗಾರಿ ಬಾರಿಸಿ ನಲಿದರು, ಪಟಾಕಿ ಸಿಡಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್