ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್

ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ.

ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.

ಘಟನೆಯ ಹಿನ್ನಲೆ :

 ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ ಭಾಗ್ಯರಿಗೆ ಕುಟುಂಬದ ವಿಚಾರದಲ್ಲಿ ತಕಾರಾರು ಉಂಟಾಗಿದ್ದು ಮೂರು ಜನ ಮಕ್ಕಳಲ್ಲಿ ಒಬ್ಬಳು ಉಪನ್ಯಾಸಕರ ಬಳಿ ವಾಸವಾಗಿದ್ದರೆ ಉಳಿದ ಇಬ್ಬರು ಭಾಗ್ಯರವರ ಬಳಿ ವಾಸಿಸುತ್ತಿರುತ್ತಾರೆ.

ಹೆಂಡತಿ ಭಾಗ್ಯ ರಂಗಪ್ಪರನ್ನು ಬಿಟ್ಟು ಹೋದ ಮೇಲೂ ಆಗಿಂದಾಗ್ಗೆ ಪೋನ್ ಮಾಡಿ ಆಸ್ತಿ ಕೊಡು ಇಲ್ಲ ಅಂದ್ರೆ ನನ್ನ ತಮ್ಮ ಅಶೋಕ ಮತ್ತು ಅಣ್ಣಪ್ಪನಿಗೆ ಹೇಳಿ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಂಗಪ್ಪನವರು ಆಸ್ತಿ ಎಲ್ಲಾ ನಿನಗೆ ಕೊಡುತ್ತೇನೆ. ಮನೆಗೆ ಬಾ ಎಂದು ಕರೆದರೂ ಶಿಕ್ಷಕಿ ಮನೆಗೆ ಬಾರದೆ ಕಲ್ಲಿಹಾಳ್ ಸರ್ಕಲ್ ನಲ್ಲಿ ಅಣ್ಣನ ಮಗ ಅಣಪ್ಪ @ ಗುಂಡನೊಂದಿಗೆ ವಾಸವಾಗಿರುತ್ತಾರೆ. ನಿನ್ನೆ ಬೆಳಿಗ್ಗೆ ರಂಗಪ್ಪನವರು ದಾನವಾಡಿಯಿಂದ ಭದ್ರಾವತಿಗೆ ಹೋಗಿ ನೂತನವಾಗಿ ಕಟ್ಟಿಸುತ್ತಿರುವ ಮನೆಯನ್ನು ನೋಡಿಕೊಂಡು ವಾಪಸು ದಾನವಾಡಿ ಗ್ರಾಮಕ್ಕೆ ಹೋಗಲು ಅರದೊಟ್ಲು ಗ್ರಾಮದ ಮುಖಾಂತರ ಹೋಗುತ್ತಿರುವಾಗ ಹಿಂದಿನಿಂದ ಬಂದ ಲಗೇಜ್ ವಾಹನ ಉಪನ್ಯಾಸಕರ ಬೈಕ್ ಗೆ ಏಕಾಏಕಿ ಡಿಕ್ಕಿ ಹೊಡೆದಿದೆ.


ಈ ಪರಿಣಾಮ ಉಪನ್ಯಾಸಕ ಬೈಕ್ ಸಮೇತ ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದಿದ್ದಾರೆ.‌ ನಂತರ ಸ್ಥಳೀಯರು ಡಿಕ್ಕಿ ಹೊಡೆದ ಲಗೇಜ್ ವಾಹನವನ್ನು ತಡೆದು ನಿಲ್ಲಿಸಿದ್ದು, ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬನನ್ನು ಪ್ರಶ್ನಿಸಿದ್ದಾರೆ.

ವಾಹನದಲ್ಲಿ ರಂಗಪ್ಪನವರ ಪತ್ನಿಯ ಸಹೋದರ ಅಶೋಕ ಇರುವುದು ತಿಳಿದು ಬಂದಿದ್ದು, ಇನ್ನೊಬ್ಬ, ಚಾಲಕನ ಹೆಸರು ತಿಳಿದು ಬಂದಿಲ್ಲ. ನಂತರ ಗಾಯಗೊಂಡ ಉಪನ್ಯಾಸಕನನ್ನು ಹೊಳೆಹೊನ್ನೂರು ಸರಕಾರಿ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಲಾಗಿದೆ.‌

ಈ ಪ್ರಕರಣ ಹೊಳೆಹೊನ್ನೂರು ಠಾಣೆಯಲ್ಲಿ ದಾಖಲಿಸಲಾಗಿದೆ. ಕೊಲೆಗೆ ಯತ್ನಿಸಿದ ಭಾವಮೈದುನ ಅಶೋಕನನ್ನು ಬಂಧಿಸಲಾಗಿದೆ.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

10 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

14 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

16 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

18 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

19 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago