ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ.


ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು.

ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ಕೇವಲ 48 ಗಂಟೆಗಳಲ್ಲಿ ಆರೋಪಿಯ ಜಾಡು ಪತ್ತೆ ಹಚ್ಚಿದ ಅರಣ್ಯ ಇಲಾಖೆಯ ಅಧಿಕಾರಿಗಳು ಶಿವಮೊಗ್ಗ ನಗರದ ನಿವಾಸಿ ವಾಸುದೇವ ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಮರಗಳನ್ನು ವಶಕ್ಕೆ ಪಡೆದಿದ್ದಾರೆ ಪ್ರಕರಣದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಅರಣ್ಯ ಇಲಾಖೆಯ ಪ್ರಕಟಣೆ :

ಶಿವಮೊಗ್ಗ ವನ್ಯಜೀವಿ ವಿಭಾಗದ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದ ಸ.ನಂ 23 ರ ಹಾರೋಹಿತ್ಲು ಮೀಸಲು ಅರಣ್ಯ ಪ್ರದೇಶಲ್ಲಿ ದಿನಾಂಕ 18.08.2023 ರಂದು ಅಕ್ರಮವಾಗಿ ಬೀಟೆ ಜಾತಿಯ ಒಂದು ಮರ ಮತ್ತು ಸಾಗುವಾನಿ ಜಾತಿಯ ಎರಡು ಮರಗಳು ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಮೊಕದ್ದಮೆ ಸಂಖ್ಯೆ:10/2023-24 ದಿನಾಂಕ: 18.08.2023 ರಂತೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಸದರಿ ಪ್ರಕರಣದ ಜಾಡುಹಿಡಿದು ಹೊರಟ ಸಿರಿಗೆರೆ ವಲಯದ ಅರಣ್ಯಾಧಿಕಾರಿಗಳ ತಂಡ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಸನ್ನಕೃಷ್ಣ ಪಟಗಾರ್‌ IFS, ಹಾಗು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ  ಬಿ.ಸುರೇಶ SFS, ರವರ ಸೂಕ್ತ ಮಾರ್ಗದರ್ಶನದಲ್ಲಿ ಶಿವಮೊಗ್ಗ ನಗರದ ಗೋಲ್ಡನ್‌ಸಿಟಿ ಕಾಲೋನಿಯ ವಾಸುದೇವ ಎಂಬಾತನನ್ನು ಬಂಧಿಸಲಾಗಿದೆ

ಆರೋಪಿಯ ಮಗಳ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮನೆಯಲ್ಲಿ ಅಕ್ರಮ ದಾಸ್ತಾನು ಇರುವುದನ್ನು ಪತ್ತೆಹಚ್ಚಿ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿ, ಬೀಟೆ ಮತ್ತು ಸಾಗುವಾನಿ ಜಾತಿಯ ಸೈಜುಗಳು 263=0.520 ಘಮೀ,  ಒಂದು ಮಾರುತಿ ಓಮ್ನಿ ಕಾರು, ಒಂದು ಪ್ಲೇನಿಂಗ್‌ ಮಷಿನ್, ಬೀಟೆ ಮತ್ತು ಸಾಗುವಾನಿ ಜಾತಿಯ ತುಂಡುಗಳು 08=0.457 ಘಮೀ ನಾಟಾವನ್ನು ಇಲಾಖಾವಶಕ್ಕೆ ಪಡೆದಿರುತ್ತದೆ.  ಬೀಟೆ ಮತ್ತು ಸಾಗುವಾನಿ ಜಾತಿಯ ಒಟ್ಟು ನಾಟಾ 271=0.977 ಘಮೀ ಇದ್ದು ಅಂದಾಜು ಮೌಲ್ಯ 1.5 ಲಕ್ಷ  ಇರುತ್ತದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ.

ಪ್ರಕರಣವನ್ನು ಭೇದಿಸುವಲ್ಲಿ ಗಿರೀಶ್  ನಾಯ್ಕ ವಲಯ ಅರಣ್ಯಾಧಿಕಾರಿಗಳು ಹಣಗೆರೆ ವನ್ಯಜೀವಿ ವಲಯ, ಸಿರಿಗೆರೆ, ನಾಗರಾಜು ಬಿ.ಕೆ, ಉಪ ವಲಯ ಅರಣ್ಯಾಧಿಕಾರಿ, ಚಿಕ್ಕಪ್ಪ ಗಸ್ತು ಅರಣ್ಯ ಪಾಲಕ, ಔರಂಗಜೇಬ ಗಸ್ತು ಅರಣ್ಯ ಪಾಲಕ ಮತ್ತು ಯೋಗೇಶ್ವರಪ್ಪ ಗಸ್ತು ಅರಣ್ಯ ಪಾಲಕ ಇವರ ತಂಡ ಯಶಸ್ವಿಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

9 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

12 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

13 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

13 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

20 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

22 hours ago