ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ..
ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ ಈ ವೇಳೆ ಬಾಲಕಿಗೆ ಮತ್ತು ಬರುವ ಔಷಧಿಯನ್ನು ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದಾರೆ.
ಅರೋಪಿ ಯುವಕರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಅಪ್ರಾಪ್ತೆಯ ಜೊತೆ ಸಂಪರ್ಕದಲ್ಲಿದ್ದ ಇವರು ಆಗಸ್ಟ್ 19ರಂದು ಪ್ರವಾಸದ ನೆಪದಲ್ಲಿ ಕರೆದಿದ್ದಾರೆ. ನಾವಿದ್ದೇವೆ ಹೋಗಿ ಬರೋಣ ಎಂದು ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾರೆ. ಪರಿಚಿತರೆಂಬ ನೆಲೆಯಲ್ಲಿ ಆಕೆಯೂ ಅವರ ಜತೆ ಬಂದಿದ್ದಾಳೆ.
ಶನಿವಾರ ಶಿವಮೊಗ್ಗದಲ್ಲಿ ಅಲ್ಲಿಲ್ಲಿ ಸುತ್ತಾಡಿಸಿದ ಇವರು ಬಳಿಕ ಆಕೆಯನ್ನು ಕರೆದುಕೊಂಡು ಸುರಕ್ಷಿತ ಜಾಗವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಮತ್ತು ಬರುವ ಔಷಧ ನೀಡಿದ್ದಾರೆ. ಆಕೆ ಮತ್ತಿಗೆ ಜಾರುತ್ತಿದ್ದಂತೆಯೇ ಇವರು ಮೊದಲೇ ನಿರ್ಧಾರ ಮಾಡಿದಂತೆ ಸರದಿಯಂತೆ ಆಕೆಯ ಮೇಲೆ ಎರಗಿದ್ದಾಳೆ. ಅರೆ ಮಂಪರಿನಲ್ಲಿದ್ದ ಆಕೆ ನೋವನ್ನು ಹೇಗೋ ಸಹಿಸಿಕೊಂಡಿದ್ದಾಳೆ.
ಸ್ವಲ್ಪ ಹೊತ್ತಿನ ಬಳಿಕ ಅರೆ ಎಚ್ಚರವಾದ ಬಳಿಕ ಆಕೆ ಎದ್ದು ನೋಡಿದರೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ತಿಳಿದಿದೆ. ಆಕೆ ಕಣ್ಣೀರು ಹಾಕಿ ಯಾಕೆ ಹೀಗೆ ಮಾಡಿದಿರಿ ಎಂದು ಕೇಳಿದ್ದಾಳೆ ಎನ್ನಲಾಗಿದೆ. ಈ ನಡುವೆ ಹುಡುಗರೇ ಆಕೆಯನ್ನು ಸಾಗರಕ್ಕೆ ಮರಳಿ ತಂದು ಬಿಟ್ಟಿದ್ದಾರೆ. ಆದರೆ, ಯಾವ ಕಾರಣಕ್ಕು ವಿಷಯವನ್ನು ಮನೆಯಲ್ಲಿ ತಿಳಿಸಬಾರದು, ತಿಳಿಸಿದರೆ ನಿನಗೇ ತೊಂದರೆ ಎಂದು ಹೆದರಿಸಿದ್ದಾರೆ.
ನೋವಿನಿಂದಲೇ ಮನೆಗೆ ಬಂದ ಬಾಲಕಿ ಮನೆಯಲ್ಲಿ ವಿಷಯ ತಿಳಿಸಿದರೆ ತನ್ನದೇ ತಪ್ಪಾಗುತ್ತದೆ, ಅವರ ಜತೆಗೆ ಹೋಗಿದ್ದು ಯಾಕೆ ಎಂದು ಕೇಳುತ್ತಾರೆ ಎಂದು ಭಯಗೊಂಡಿದ್ದಳು. ಆದರೆ ಮನೆಯಲ್ಲಿ ಆಕೆಯ ಚಲನವಲನ, ಆಕೆ ಅನುಭವಿಸುತ್ತಿರುವ ನೋವು ಕಂಡು ವಿಚಾರಿಸಿದಾಗ ಸತ್ಯ ಹೊರಗೆ ಬಂದಿದೆ.
ಈ ಘಟನೆ ಆಗಸ್ಟ್ 19 ರಂದು ನಡೆದಿದ್ದು, ನಿನ್ನೆ ಸಂಜೆ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್