ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!
ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ.
ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಕೋಟೆ ಗ್ರಾಮದಲ್ಲಿ ಸ್ವಾಮಿನಾಥ (32) ಎಂಬ ಯುವಕ ಮೃತಪಟ್ಟಿದ್ದಾನೆ. ಸ್ವಾಮಿನಾಥ್ಗೆ ಎರಡು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹುಡುಗಿ ಈತನಿಗಿಂತ ಮೂರು ವರ್ಷ ದೊಡ್ಡವಳು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಬೇಸರಗೊಂಡಿದ್ದ ಈತ ಮದುವೆ ಬೇಡವೆಂದು ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ.
ಇದು ಹುಡುಗಿ ಮನೆಯವರಿಗೆ ತಿಳಿದು ಸ್ವಾಮಿನಾಥನ ಮನೆಗೆ ಬಂದು ಗಲಾಟೆ ಮಾಡಿ ಮದುವೆ ಆಗುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದೆ .ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದೀಗ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…