ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.


ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ ಚುನಾವಣೆ ಅಧಿಕಾರಿಯಾಗಿ ಸುರೇಶ್ ರವರು ಕಾರ್ಯನಿರ್ವಹಿಸಿದ್ದಾರೆ.

ನೂತನವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಎಂ ಎಂ ಪರಮೇಶ್ ಹಾಗೂ ಉಪಾಧ್ಯಕ್ಷ ಎನ್ ಪಿ ರಾಜು ರವರಿಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ್ ಗೌಡ , ಕಲಗೋಡು ರತ್ನಾಕರ್ ,ಬಿ ಪಿ ರಾಮಚಂದ್ರ ,ಅಮೀರ್ ಹಂಜಾ , ಈಶ್ವರಪ್ಪ ಗೌಡ , ಆಸೀಫ಼್ ಭಾಷಾ , ಜಿ ಆರ್ ಗೋಪಾಲಕೃಷ್ಣ ಹಾಗೂ ಇನ್ನಿತರರು ಶುಭಾಶಯ ಕೋರಿದ್ದಾರೆಮ್

Leave a Reply

Your email address will not be published. Required fields are marked *