ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ
ರಿಪ್ಪನ್ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು ಕೈಗೊಂಡಿದ್ದಾರೆ.
ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ ಸಿದ್ದೇಶ್ವರ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ಹಾಗೂ ರುದ್ರಹೋಮದೊಂದಿಗೆ ಕೋಣಂದೂರು ಬೃಹನ್ಮಠದ ಶ್ರೀಗಳಿಗೆ `ಕರಣಪ್ರಸಾದ’ ನೀಡಿ ಶಿವಜಪಾನುಷ್ಠಾನ ಕಾರ್ಯವನ್ನು ಮಂಗಲಗೊಳಿಸುವರು.
ನಂತರ ಧರ್ಮ ಸಮಾರಂಭ ಕಾರ್ಯಕ್ರಮದ ವೀರಾಪುರ ಹಿರೇಮಠದ ಷ.ಬ್ರ.ಮರಳಸಿದ್ದೇಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಷ.ಬ್ರ.ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು.
ಸಾಲೂರು ಹಿರೇಮಠದ ಷ.ಬ್ರ.ಗುರುಲಿಂಗ ಜಂಗಮ ಶಿವಾಚಾರ್ಯ ಮಹಾಸ್ವಾಮಿಜಿ,ಕಡೇನಂದಿಹಳ್ಳಿ ಹೋಳಿನ ಹಂಪೇಶ್ವರ ಮಠದ ಷ.ಬ್ರ.ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಜಿ,ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾ ಸ್ವಾಮೀಜಿ ಸಮ್ಮುಖ ವಹಿಸಿ ನುಡಿ ಸೇವೆ ಸಲ್ಲಿಸುವರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಬಿ.ವೈ.ವಿಜೇಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ಶ್ರೀಸಕ್ರಿಸಿದ್ದೇಶ್ವರ ದೇವಸ್ಥಾನ ಸಮಿತಿಯ ಪ್ರಕಟಣೆ ತಿಳಿಸಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್