ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.
ಇದೀಗ ಬಿವೈ ರಾಘವೇಂದ್ರ ಅವರ ಮನೆಯನ್ನು ಸಂಪರ್ಕಿಸುವ ರಸ್ತೆಯಲ್ಲೇ ಪುನುಗು ಬೆಕ್ಕಿನ ಮೃತದೇಹ ಪತ್ತೆಯಾಗಿರೋದು ಆತಂಕ ಮೂಡಿಸಿದೆ.
ಅಪಘಾತವಾದ ಸ್ಥಿತಿಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆಯಾಗಿದ್ದು, ಸದ್ಯ ಅದರ ಫೋಟೋವನ್ನು ಜನರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಶೇರ್ ಮಾಡ್ತಿದ್ದಾರೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪುನುಗು ಬೆಕ್ಕಿನ ಮೂಲಕ ವಾಮಾಚಾರ ಮಾಡಿಸಿದ್ದರು ಎಂಬ ವಿಚಾರ ತಣ್ಣಗಾಗುತ್ತಿರುವಾಗಲೇ ಈಗ ಮತ್ತೊಮ್ಮೆ ಪುನಗು ಬೆಕ್ಕು ಪ್ರತ್ಯಕ್ಷವಾಗಿದೆ.
ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯ ರಾಘವೇಂದ್ರ ಅವರ ತೋಟಕ್ಕೆ ಹೋಗುವ ದಾರಿಯಲ್ಲಿ ಪುನಗು ಬೆಕ್ಕು ಪತ್ತೆಯಾಗಿದ್ದು, ಈ ಹಿಂದೆ ಪತ್ತೆಯಾಗಿದ್ದಾಗ ‘ನಮ್ಮ ತೋಟದ ಮನೆ ಬಳಿ ಚುನಾವಣೆಯಲ್ಲಿ ವಿಜಯೇಂದ್ರ ಸೋಲಬೇಕು ವಾಮಾಚಾರ ಮಾಡಿದ್ದಾರೆ’ ಎಂದು ಆರೋಪಿಸಿ ಬಿವೈ ರಾಘವೇಂದ್ರ ಅವರು ದೂರು ನೀಡಿದ್ದರು.
ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್