ಸಾಗರದಲ್ಲಿ ರೌಡಿಗಳ ಪರೇಡ್|sagara
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಸಾಗರ ಉಪವಿಭಾಗದ ವ್ಯಾಪ್ತಿ ರೌಡಿ ಪರೇಡ್ ನಡೆಸಿದ್ಧಾರೆ.
ಸಾಗರ ಟೌನ್ ಪೊಲೀಸ್ ಸ್ಟೇಷನ್ ಎದುರು ಪರೇಡ್ ನಡೆಸಿದ ಅವರು
ರೌಡಿಸಂ ನಡೆಸುತ್ತಿರುವವರಿಗೆ ಎಚ್ಚರಿಕೆ ನೀಡಿ ಮಾತನಾಡಿದ ಅವರು, ನಿಮ್ಮ ಹೆಂಡತಿ ಮಕ್ಕಳ ಜೊತೆ ಉತ್ತವiವಾಗಿ ಸಂಸಾರಮಾಡಿಕೊಂಡು ಹೋಗಿ. ಇಲಾಖೆಯಿಂದ ನಿಮಗೆ ಯಾವುದೇ ತೊಂದರೆ ಬರುವುದಿಲ್ಲ. ಒಂದೊಮ್ಮೆ ನಿಮ್ಮ ಹಳೆ ಚಾಳಿಯನ್ನು ಪುನರಾರಂಭಿಸಿದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದರು.
ಮಾದಕ ವಸ್ತು ಸೇವನೆ, ಸಾಗಾಣಿಕೆ, ಜೂಜು ಮಟ್ಕಾ ದಂಧೆ, ಮಹಿಳೆಯರನ್ನು ಚುಡಾಯಿಸುವುದು, ರೌಡಿಸಂ ಇನ್ನಿತರೆ ಚಟುವಟಿಕೆಗೆ ಅವಕಾಶ ಇಲ್ಲ. ಪೊಲೀಸ್ ನಿಮ್ಮ ಮೇಲೆ ಕಣ್ಣಿಟ್ಟಿರುತ್ತದೆ. ದೇಶದ ಕಾನೂನಿಗೆ ನೀವು ಗೌರವ ಕೊಡುವುದನ್ನು ಕಲಿಯಿರಿ. ಅದನ್ನು ಬಿಟ್ಟು ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದರೆ ಸುಮ್ಮನಿರುವುದಿಲ್ಲ.
ಶಾಲಾಕಾಲೇಜು ಅಕ್ಕಪಕ್ಕದಲ್ಲಿ ತಂಬಾಕುಮಿಶ್ರಿತ ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ಜೊತೆಗೆ ಕೆಲವು ವಿದ್ಯಾರ್ಥಿಗಳು ತ್ರಿಬಲ್ ರೇಡಿಂಗ್ ಹೋಗುವುದು, ಕರ್ಕಶ ಹಾರನ್ ಬಾರಿಸುವುದು, ನಂಬರ್ ಪ್ಲೇಟ್ ಇಲ್ಲದೆ ದ್ವಿಚಕ್ರ ವಾಹನ ಓಡಿಸುವುದನ್ನು ಮಾಡುತ್ತಿದ್ದು ಅಂತಹವರ ವಿರುದ್ದ ದಿನಕ್ಕೆ ಎರಡು ಕೇಸ್ ಕಡ್ಡಾಯ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿಗೃಹಗಳಲ್ಲಿ ಸರ್ಕಾರದ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ರೂಮ್ಗಳನ್ನು ನೀಡುವಾಗ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದ ಅವರು, ಗಣೇಶನ ಹಬ್ಬ ಸೇರಿದಂತೆ ವಿವಿಧ ಹಬ್ಬಗಳು ಬರುತ್ತಿದ್ದು ಶಾಂತಿ ಸೌಹಾರ್ದತೆ ಕಾಪಾಡಲು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
ಇನ್ಸ್ಪೆಕ್ಟರ್ ಗಳಾದ ಸೀತಾರಾಂ, ಕೃಷ್ಣಪ್ಪ, ಸಬ್ ಇನ್ಸ್ಪೆಕ್ಟರ್ ಗಳಾದ ತುಕಾರಾಮ ಸಾಗರಕರ್, ನಾರಾಯಣ ಮಧುಗಿರಿ, ಸುಜಾತ, ನಾಗರಾಜ್ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್