January 11, 2026

ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಲಾರಿಗಳ ಅಪಘಾತ|ಕಂದಕಕ್ಕೆ ಉರುಳಿದ ಲಾರಿ ಚಾಲಕನ ಸ್ಥಿತಿ ಗಂಭೀರ|accident

ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ  ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ ಬಳಿಯಲ್ಲಿ ಭತ್ತ ತುಂಬಿದ್ದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಇಂದು ಸಂಜೆಯ ವೇಳೆ ಅರೋಡಿ ಸಮೀಪದ ಸೇತುವೆ ಮೇಲೆ ಲಾರಿಯೊಂದು ತಡೆಗೋಡೆಗೆ ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಲಾರಿಯನ್ನು ತೆರವುಗೊಳಿಸುವ ವೇಳೆ ಮತ್ತೊಂದು ಲಾರಿ ಅದೇ ಸ್ಥಳದಲ್ಲಿ ಅಪಘಾತವಾಗಿದೆ.ನೋಡನೋಡುತಿದ್ದಂತೆ ಎರಡು ಅಪಘಾತಗಳು ನಡೆದಿದ್ದು ಒಂದು ಲಾರಿಯನ್ನು ಮೇಲೆತ್ತುವ ವೇಳೆ ಮತ್ತೊಂದು ಲಾರಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ

ಅರೋಡಿ ಸಮೀಪದ ಸೇತುವೆಯೊಂದಕ್ಕೆ ಲಾರಿಯೊಂದು ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಕ್ರೇನ್ ಸಹಾಯದಿಂದ ಲಾರಿಯನ್ನು ಎಳೆಯುತಿದ್ದಾಗ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಮತ್ತೊಂದು ಲಾರಿ ನಿಯಂತ್ರಣಕ್ಕೆ ಸಿಗದೇ ಕಂದಕಕ್ಕೆ ಉರುಳಿದೆ.

ಘಟನೆಯಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *