2 ಕೆಜಿ ಗಾಂಜಾ ಸಹಿತ ಆರೋಪಿಗಳು ಅರೆಸ್ಟ್! ಗಡಿಪಾರಾದ ರೌಡಿಶೀಟರ್ ನಿಂದ ಆಂಧ್ರದ ಗಾಂಜಾ ಜಿಲ್ಲಾದ್ಯಂತ ಸಪ್ಲೈ..!!???

ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್​ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ.


ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ  ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ  ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ  ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ  ಪ್ರಭು ಡಿ.ಟಿ ನೇತ್ರತ್ವದಲ್ಲಿ ಸಿಇಎನ್ ಕ್ರೈಂ ಪೊಲೀಸ್ ಠಾಣೆ ದೀಪಕ್, ಎಂ.ಎಸ್ ಟೀಂ  ಮರ್ದಾನ್‌ ಕಿರ್‌ವಾಡಿ, ಸಂದೀಪ್‌, ಸಮೀವುಲ್ಲಾ ಹಾಗೂ ಸಿಪಿಸಿ ಚಿದಂಬರ್, ಫಿರ್ ದೋಸ್ ಅಹಮ್ಮದ್, ಪರಮೇಶ್ವರಪ್ಪ, ರವಿ, ಪ್ರಮೋದ್, ಜಗದೀಶ್‌ ಸಂಗಮಶ್‌ ಮತ್ತು ಎಹೆಚ್‌ಸಿ ಪ್ರಕಾಶನಾಯಾ ರವರುಗಳನ್ನೊಳಗೊಂಡ ಗಾಂಜಾ ಮಾರಾಟದ ಜಾಲದ ಮೇಲೆ ದಾಳಿ ಮಾಡಿದೆ.

2ಕೆಜಿ ಗಾಂಜಾ ಪತ್ತೆ

ಪೊಲೀಸರ ದಾಳಿಯಲ್ಲಿ ಬರೋಬ್ಬರಿ 2 ಕೆಜಿ ಗಾಂಜಾ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ 1,10,000/- ರೂಗಳಾಗಿವೆ. ಒಟ್ಟು 2 ಕೆ. ಜಿ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 2,50,000/- ರೂಗಳ ಕೆಟಿಎಂ ಡ್ಯೂಕ್ ಬೈಕ್ ಅನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ಬಂಧಿತರು :

1 ಪ್ರವೀಣ್ @ ಮೋಟು ಬಿನ್ ಮೂರ್ತಿ 24 ವರ್ಷ, ವಾಸ ಗೌರವ್ ಲಾಡ್ಜ್ ಹಿಂಭಾಗ ಸವಾರ್‌ ಲೈನ್ ರಸ್ತೆ, ಶಿವಮೊಗ

2) ವಿಶಾಲ್, ಏ @ ಪಾಲ: ಔನ್ ವಿಶ್ವನಾಥ ಎಸ್, 25 ವರ್ಷ, ವಾಸ 06ನೇ ತಿರುವು ಹೊಸಮನೆ ಆಂಜನೇಯ ದೇವಸ್ಥಾನದ ಹತ್ತಿರ ಶಿವಮೊಗ್ಗ,

3) ನಿತೇಶ್‌ ಎಸ್‌ ವೈ, ಬಿನ್. ಎಸ್. ಯೋಗೇಶ್ 21 ವರ್ಷ, ವಾಸ ಕಲ್ಪತರು ಹಾಸ್ಟೆಲ್‌ ತಿಪಟೂರು ತುಮಕೂರು ಜಿಲ್ಲೆ, ಮತ್ತು

4) ಪ್ರೀತಂ ಕೆ @ ಡಿಟೋ ಬಿನ್ ಕೃಷ್ಣ 22 ವರ್ಷ, ವಾಸ ದರ್ಗಾ ಲೇ ಔಟ್ 01ನೇ ತಿರುವು ಗಾಡಿಕೊಪ್ಪ


ಗಡಿಪಾರಾಗಿದ್ದ ಆರೋಪಿಯಿಂದಲೇ ಗಾಂಜಾ ಮಾರಾಟ!

ಇನ್ನೂ ಈ ಪ್ರಕರಣದಲ್ಲಿ ಬಂಧಿತನಾಗಿರುವ ಎ1 ಆರೋಪಿ ಪ್ರವೀಣ್ ಅಲಿಯಾಸ್ ಮೋಟು ಇದೇ 2024 ಸಾಲಿನ ಮೇ ತಿಂಗಳವರೆಗೂ ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರಾಗಿದ್ದ , ಈತನನ್ನ ಜಿಲ್ಲಾಧಿಕಾರಿಗಳು 2024 ಏಪ್ರಿಲ್ ತಿಂಗಳವರೆಗೆ ಶಿವಮೊಗ್ಗ ಜಿಲೆಯಿಂದ ಗಡಿಪಾರು ಮಾಡಿ ಆದೇಶ ಮಾಡಿದ್ದರು. ಆದರೆ ಆದೇಶ ಉಲ್ಲಂಘಿಸಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ಧಾನೆ. ಈತನ ಮೇಲೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ಸೇರಿದಂತೆ 10 ಪ್ರಕರಣಗಳಿವೆ. ಹಿಂದೊಮ್ಮೆ ಈತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಗಾಂಜಾ ದಂಧೆಯಲ್ಲಿ ತೊಡಗಿದ್ದ ಈತನನ್ನ ಪೊಲೀಸರು ಬಂಧಿಸಿದ್ದಾರೆ.

ಎರಡನೇ ಆರೋಪಿ ರೌಡಿಶೀಟರ್

ಇನ್ನೂ ಪ್ರಕರಣದ ಎರಡನೇ ಆರೋಪಿ  ವಿಶಾಲ್, ಎ @ ಡಾಲು ಈತನೂ ಸಹ ರೌಡಿ ಆಸಾಮಿಯಾಗಿದ್ಧಾನೆ..  ಈತನ ವಿರುದ್ಧ ಶಿವಮೊಗ್ಗ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ, ಒಟ್ಟು 05 ಪ್ರಕರಣಗಳು ದಾಖಲಾಗಿವೆ.  4ನೇ ಆರೋಪಿ ಪ್ರೀತಂ ಕೆ @ ಡಿಟೋ ಈತನ ವಿರುದ್ಧವೂ ಕೂಡ ಶಿವಮೊಗ್ಗ ನಗರದ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಆಂಧ್ರ ಗಾಂಜಾ ಜಪ್ತಿ?

ಈ ಹಿಂದೆ ಎಸ್​ಪಿ ಲಕ್ಷ್ಮೀಪ್ರಸಾದ್ ಇದ್ದ ಸಂದರ್ಭದಲ್ಲಿ ಆಂಧ್ರದ ಶೀಲಾವತಿ ಗಾಂಜಾ ದೊಡ್ಡಮಟ್ಟದಲ್ಲಿ ಶಿವಮೊಗ್ಗದಲ್ಲಿ ಸದ್ದು ಮಾಡಿತ್ತು. ಅಲ್ಲದೆ ಜಿಲ್ಲೆಯೊಳಗೆ ಸರಾಗವಾಗಿ ಬರುತ್ತಿದ್ದ ಆಂಧ್ರ ಗಾಂಜಾದ ಎಲ್ಲಾ ದಾರಿಗಳನ್ನು ಶಿವಮೊಗ್ಗ ಪೊಲೀಸರು ಬಹುತೇಕ ಬಂದ್ ಆಗುವಂತೆ ಮಾಡಿದ್ದರು. ಇದೀಗ ಇವತ್ತು ಪತ್ತೆಯಾಗಿರುವ ಗಾಂಜಾದ ಮೂಲ ಆಂಧ್ರ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

17 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

19 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago