Headlines

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More

ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಲಾರಿಗಳ ಅಪಘಾತ|ಕಂದಕಕ್ಕೆ ಉರುಳಿದ ಲಾರಿ ಚಾಲಕನ ಸ್ಥಿತಿ ಗಂಭೀರ|accident

ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ  ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ…

Read More

ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್  3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ  6)ಶ್ರೀಕಾಂತ್…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!

ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು.  ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More