ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…

Read More

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ:  ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್  ಮತ್ತು  ಸುದೀಪ್….

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…

Read More

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ – ಸಂಸದ ಬಿ ವೈ ರಾಘವೇಂದ್ರ|BYR

ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ವಿನೋಬನಗರದ ಪಿಎನ್‌ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More