ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.
ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು ನಿಧಿಶೋಧ ನಡೆಸಿದ್ದರು.
ಈ ಸಂಬಂಧ ಗ್ರಾಮ ಸುಧಾರಣೆ ಸಮಿತಿ ಪ್ರಮುಖರು ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ಆರಂಭಿಸಿದ್ದ ಆನಂದಪುರ ಪೊಲೀಸರು, ಕೇಶವ, ಸಾಜು, ಅಂತೋನಿ, ಜನಾರ್ಧನ, ಸೋಮಶೇಖರ ಎಂಬುವವರ ವಿರುದ್ಧ ಕೇಸ್ ದಾಖಲಿಸಿ , ಈ ಪೈಕಿ ಕೇಶವ, ಅಂತೋನಿಯನ್ನು ಬಂಧಿಸಿದ್ದಾರೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…