ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..??
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.
ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು.
ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕೆಲವು ಸ್ಥಳೀಯ ಮಾದ್ಯಮಗಳಲ್ಲಿ ವರದಿಯಾಗಿತ್ತು.
ಆನಂತರ ಮೃತನ ಪುತ್ರ ಪೊಲೀಸರಿಗೆ ಹೇಳಿಕೆ ನೀಡಿದ್ದು, ಸತೀಶ್ ರವರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ, ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ ತಕ್ಷಣವೇ ನೀರಿನಿಂದ ಮೇಲಕ್ಕೆತ್ತಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯ್ತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…