Breaking
14 Jan 2026, Wed

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ|arrested


ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ


ಸಾಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ.

ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ. ಅಲ್ಲದೆ, ಒಂಟಿ ಮನೆಗಳನ್ನು ಗುರುತಿಸಿ, ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ.



ಸೆ.10ರಂದು ಆರೋಪಿ ಹದೀದ್ ಷಾ ಅಂಬಾರಗೋಡ್ಲು ಗ್ರಾಮದ ಸುಜಾತ ಕೋಂ ಶೇಖರ್ ಶೆಟ್ಟಿ ಎಂಬವರ ಮನೆಗೆ ನುಗ್ಗಿ ಸಿಸಿ ಕ್ಯಾಮೆರಾ ಸಂಪರ್ಕವನ್ನು ಕಡಿತಗೊಳಿಸಿ, ಮಾರಾಣಾಂತಿಕ ಹಲ್ಲೆ ನಡೆಸಿದ್ದನು. ಆರೋಪಿ ಪತ್ತೆಗೆ ಇಳಿದ ಪೊಲೀಸರು ಹದೀದ್ ಷಾನನ್ನು ಬಂಧಿಸಿದ್ದಾರೆ. ಅಲ್ಲದೇ, ಹಲ್ಲೆ ಮಾಡಲು ಆತ ಬಳಸಿದ್ದ ಕಬ್ಬಿಣದ ರಾಡ್, ಸಿಸಿ ಕ್ಯಾಮರಾ ತಂತಿ ತುಂಡು ಮಾಡುವ ವಸ್ತು, ಮಾಸ್ಕ್, ಹ್ಯಾಂಡ್ ಗ್ಲೌಸ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯ್ಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಮಹಾಬಲೇಶ್ವರ ನಾಯ್ಕ್, ಸಬ್ ಇನ್‌ಸ್ಪೆಕ್ಟರ್ ನಾರಾಯಣ ಮಧುಗಿರಿ, ಸಿಬ್ಬಂದಿ ಸನಾವುಲ್ಲಾ, ಶ್ರೀಧರ್, ಸವಿತಾ, ಪ್ರವೀಣಕುಮಾರ್, ರವಿಕುಮಾರ್, ಗುರುಬಸವರಾಜ, ವಿಶ್ವನಾಥ್ ಮತ್ತು ಚಾಲಕ ಗಿರೀಶ್ ಬಾಬು ಪಾಲ್ಗೊಂಡಿದ್ದರು. 

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *