ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು
ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು.


ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದ ಪದವಿ ಪೂರ್ವ ಕಾಲೇಜ್‌ಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದೆೆ ಎಂದು ನಾನು ಸಾಕಷ್ಟು ಭಾರಿ ಈ ಹಿಂದಿನ ಬೊಮ್ಮಾಯಿ ಸರ್ಕಾರದಿಂದ ಹಿಡಿದು ಈಗಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯಲ್ಲಿ ಸಾಕಷ್ಟು ಭಾರಿ ಚರ್ಚಿಸಲಾಗಿದ್ದರೂ ಕೂಡಾ ನಿರ್ಲಕ್ಷö್ಯ ವಹಿಸಿದ್ದಾರೆ.


ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇದೆ ಗ್ರಾಮೀಣ ಪ್ರದೇಶದಲ್ಲಿ ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಕಾಲೇಜ್‌ಗಳನ್ನು ಮುಚ್ಚುವ ಸ್ಥಿತಿ ಎದುರಾಗಿದೆ ಎಂದು ಅತಂಕ ವ್ಯಕ್ತಪಡಿಸಿ ಈಗಾಗಲೇ ನಾನು ಸರ್ಕಾರದ ಮಟ್ಟದಲ್ಲಿ ಶಿಕ್ಷಕರ ಕೊರತೆಯ ಕುರಿತು ದ್ವನಿ ಎತ್ತಿದ್ದು ಈ ವರೆಗೂ ಗಮನಹರಿಸದೇ ಇರುವುದರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿ ಕ್ರೀಡೆ ಮನಸ್ಸಿಗೆ ಆರೋಗ್ಯ ಕೊಟ್ಟರೆ ಆರೋಗ್ಯವಂತ ವಿದ್ಯಾರ್ಥಿಯಾಗಲು ಸಾಧ್ಯ ಅದೇ ರೀತಿಯಲ್ಲಿ ಮಕ್ಕಳಿಗೆ ಉತ್ತಮ ನೀಡಿದಲ್ಲಿ ವಿದ್ಯಾರ್ಥಿ ಉತ್ತುಂಗಕ್ಕೇರಲು ಸಾದ್ಯವಾಗುವುದೆಂದು ಹೇಳಿ ಸರ್ಕಾರ ಕ್ರೀಡಾಕೂಟಗಳಿಗೆ ನೀಡುವ ಅನುದಾನ ಕೇವಲ 10 ಸಾವಿರ ರೂ ಅದರಿಂದ ಇಂದಿನ ದುಬಾರಿ ಬೆಲೆ ಏರಿಕೆಯಲ್ಲಿ ಏನು ತರಲು ಸಾದ್ಯವೆಂದು ಹೇಳಿ ಪ್ರತಿಭಾ ಕಾರಂಜಿ ಮತ್ತು ಕ್ರೀಡಾಕೂಟಕ್ಕೆ ಉತ್ತೇಜನ ನೀಡುವುದರೊಂದಿಗೆ ಆರ್ಥಿಕಾ ಭದ್ರತೆಯೊಂದಿಗೆ ಸರ್ಕಾರದ ಕಣ್ಣು ತೆರೆಸುವ ಪ್ರಯತ್ನ ಮಾಡುವ ಭರವಸೆ ನೀಡಿ ನೋಲು ಗೆಲುವಿನ ಸೋಪಾನ ಎಂದು ಹೇಳಿ ಸೋಲು ಎಂದು ಕೀಳರಿಮೆ ತೊರದೆ ಸತತ ಪ್ರಯತ್ನ ಮಾಡಿ ಗೆಲುವನ್ನು ಸಾಧಿಸುವುದೇ ಮನುಷ್ಯನ ನಿಜವಾದ ಗೆಲುವು ಎಂದರು.

(ಆತಿಥಿಗಣ್ಯರಿಗೆ ನೆರಳಿನ ಭಾಗ್ಯ ವಿದ್ಯಾರ್ಥಿಗಳಿಗೆ ಬಿಸಿಲಿನ ಭಾಗ್ಯ)

ಇಂದು ತಾಲ್ಲೂಕ್ ಮಟ್ಟದ ಪದವಿ ಪೂರ್ವ ಕಾಲೇಜ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಅತಿಥಿಗಣ್ಯರಿಗೆ ನೆರಳಿನಲ್ಲಿ ಕುಳಿತು ಗಂಟೆಗಳ ಕಾಲ ಭಾಷಣ ಮಾಡಿದರೆ ವಿದ್ಯಾರ್ಥಿಗಳು ಬಿಸಿಲಿನ ಝಳಕ್ಕೆ ತತ್ತರಿಸಿ ಹೈರಾಣದರು.

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿ.ಉಪನಿರ್ದೇಶಕ ಬಿ.ಕೃಷ್ಣಪ್ಪ, ಜಿ.ಪಂ ಮಾಜಿ ಸದಸ್ಯ ಬಿ.ಪಿ.ರಾಮಚಂದ್ರ,ಅಮೃತ ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ,ಸಿಡಿಸಿ ಕಾರ್ಯಾದ್ಯಕ್ಷ ಟಿ.ಡಿ.ಸೋಮಶೇಖರ್,ಉಪಾಧ್ಯಕ್ಷ ನಾಗೇಶ ಉಂಬ್ಳೆಬೈಲು, ವಾಸಪ್ಪಗೌಡ,ದಿನೇಶ್ ಬಂಡಿ ಗ್ರಾ.ಪಂ.ಉ.ವಿನೋಧ,ಮಂಜುಳ,ದೇವರಾಜ್,ಶಿವಮೊಗ್ಗ ಜಿಲ್ಲಾ ನಿವೃತ್ತ ಉಪನಿರ್ದೇಶಕನಾಗರಾಜ್ ವಿ.ಕಾಗಲ್ಕರ್,ಉದಯಕುಮಾರ್ ವಿ.ಚಂದ್ರಪ್ಪ ಗುಂಡುಪಲ್ಲಿ,ಹಾಲಪ್ಪ ಸಂಕೂರ್,ಎಂ. ಬಾಲಚಂದ್ರರಾವ್, ರಮೆಶ್‌ ಇನ್ನಿತರರು ಹಾಜರಿದ್ದರು. ಹಾಲಪ್ಪ ಸಂಕೂರ್ ಸ್ವಾಗತಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

24 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago