ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ: ಬೇಳೂರು
ರಿಪ್ಪನ್ಪೇಟೆ : ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಪ್ರಬಲ ಇಚ್ಚಾಶಕ್ತಿಯೊಂದಿಗೆ ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿ ಪಡಿಸಬೇಕು. ಇದಕ್ಕೆ ಬೇಕಾದ ಆರ್ಥಿಕ ಅನುದಾನ ಮತ್ತು ನೆರವನ್ನು ಸರ್ಕಾರ ನೀಡುತ್ತದೆ. ತನ್ಮೂಲಕ ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ, ಪ್ರಗತಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ನೂತನ ಉದ್ಯಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಸಿಗುವ ಕಚ್ಛಾವಸ್ತುಗಳನ್ನು ಬಳಸಿ ಕಿರು ಉದ್ದಿಮೆಗಳನ್ನು ಪ್ರಾರಂಭಿಸಬೇಕು. ಇದಕ್ಕೆ ಬೇಕಾದ ಕೌಶಲ ಅಭಿವೃದ್ಧಿಗಾಗಿ ಸರ್ಕಾರ ತರಬೇತಿ ನೀಡುತ್ತದೆ. ಯುವಜನತೆ ನೌಕರಿ ಬೇಟೆಯಲ್ಲಿ ತೊಡಗದೆ ಸ್ವಂತ ಉದ್ದಿಮೆ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿ ನೂತನ ಉದ್ಯಮಕ್ಕೆ ಶುಭ ಕೋರಿದರು.
ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮಾಲೀಕರಾದ ರಮೇಶ್ ವೈ ಬಿ ಮಾತನಾಡಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ , ಟಿಎಮ್ ಟಿ ಬಾರ್ ಗಳು,ಜೆಸಿಬಿ ,ಹಿಟಾಚಿ ,ಟಿಪ್ಪರ್ ಹಾಗೂ ಇನ್ನಿತರ ಅರ್ಥ್ ಮೂವರ್ ವಾಹನಗಳು ಒಂದೇ ಸ್ಥಳದಲ್ಲಿ ದೊರೆಯಲಿದೆ ಎಂದರು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ,ಹಾಲಸ್ವಾಮಿಗೌಡ ,ಆಸೀಫ಼್ ಭಾಷಾ ,ಸಣ್ಣಕ್ಕಿ ಮಂಜು, ರವೀಂದ್ರ ಕೆರೆಹಳ್ಳಿ ,ಗಣಪತಿ , ರಮೇಶ್ ಫ್ಯಾನ್ಸಿ,ಉಲ್ಲಾಸ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್