ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ
ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ ಹಿಂದೆಯೇ ಇದು ಜಾರಿ ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು ಧ್ವನಿ ಎತ್ತದ ಕಾರಣ ಬೇಡಿಕೆ ಈಡೆರಲು ವಿಳಂಬವಾಗಿದೆ ಎಂದರು.
1973 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ನಾನು ಗಣಿ ರೈತರ ಕುರಿತು ಸತತ ಮೂರು ಗಂಟೆಗಳ ಕಾಲ ಮಾತನಾಡಿದ್ದೇನೆ.
ಮುಖ್ಯಮಂತ್ರಿ ದೇವರಾಜ್ ಅರಸು ಅವರು ಸಹ ನನ್ನ ಅಹವಾಲುಗಳನ್ನು ಶಾಂತ ಚಿತ್ತದಿಂದ ಆಲಿಸಿದರು. ಉಳುವವನೇ ಹೊಲದೊಡೆಯ ಕಾನೂನು ಜಾರಿಗೊಳಿಸಿದ್ದರು ಎಂಬುದನ್ನು ಸ್ಮರಿಸಿದರು.
ಪಕ್ಷ ಯಾವುದೇ ಇರಲಿ ಸಮಾಜಮುಖಿ ಉತ್ತಮ ಜನಪರ ಕಾಳಜಿಯನ್ನು ಪರಸ್ಪರ ಗೌರವಿಸುವ ಗುಣ ಯುವ ರಾಜಕಾರಣಿಗಳು ಮೈಗೂಡಿಸಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಈಗಾಗಲೇ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ ಎಲ್ಲಿ ಶೇಕಡ 50 ಮೀಸಲಾತಿ ಇದ್ದು ಮುಂದಿನ ದಿನದಲ್ಲಿ ಇದು ಏಕರೂಪ ನಾಗರಿಕ ಸಂಹಿತೆ ಜಾರಿಗೊಂಡಲ್ಲಿ ಶೇಕಡ 33 ಕ್ಕೆ ಇಳಿದರು ಅಚ್ಚರಿ ಪಡುವ ಅಗತ್ಯವಿಲ್ಲ ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಸ್ಯರುಗಳಿಗೆ ತಪ್ಪು ಮಾಹಿತಿ ನೀಡದೆ ಕಾನೂನಿನ ಅರಿವು ಮೂಡಿಸಿ, ಆಡಳಿತ ಯಂತ್ರಕ್ಕೆ ಬಲ ತುಂಬುವ ಕೆಲಸ ಮಾಡಬೇಕೆಂದು ಕಿವಿ ಮಾತು ಹೇಳಿದರು.
ಗ್ರಾ.ಪಂ.ಅಧ್ಯಕ್ಷೆ ಧನಲಕ್ಷಿ ಗಂಗಾಧರ್,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಸದಸ್ಯರಾದ ಮಂಜುಳ ಕೇತಾರ್ಜಿರಾವ್ ಜಿ.ಡಿ.ಮಲ್ಲಿಕಾರ್ಜುನ,ಪಿ.ರಮೇಶ್,ಆಸೀಫ಼್ ಭಾಷಾ,
ಪ್ರಕಾಶಪಾಲೇಕರ್,ವೇದಾವತಿ,ಅನುಪಮ,ಸುಂದರೇಶ್,ಮುಖಂಡರಾದ ರವೀಂದ್ರ ಕೆರೆಹಳ್ಳಿ,ಪಿಡಿಓ ಮಧುಸೂದನ್,ಕಛೇರಿಯ ಸಿಬ್ಬಂದಿಗಳಾದ ಮಧುಶ್ರೀ,ಲಕ್ಷ್ಮಿ ನಾಗರಾಜ್,ಮಂಜಪ್ಪ,ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್