ರಿಪ್ಪನ್ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ
ರಿಪ್ಪನ್ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಧರ್ಮದ ಮುಖಂಡರು ಹಾಗೂ ಜನಪ್ರತಿನಿಧಿಗಳು ಹಾಗೂ ಗಣಪತಿ ಕಮಿಟಿ ಹಾಗೂ ಈದ್ ಮಿಲಾದ್ ಕಮಿಟಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ತಪ್ಪದೆ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಮಾರ್ಗಸೂಚಿಗಳನ್ನು ಪಡೆದುಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್