ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ.


ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ.

ಏನಿದು ಘಟನೆ:

ಕೆರೆಹಳ್ಳಿ ಗ್ರಾಮದಲ್ಲಿ ಮೇಯಲು ಹೊರಟಿದ್ದ ಕೆಲ ಜಾನುವಾರು ಅಲ್ಲಲ್ಲಿ ಮೃತಪಟ್ಟಿವೆ. ಇನ್ನು ಕೆಲ ಜಾನುವಾರುಗಳು ಹೊಟ್ಟೆ ಉಬ್ಬಿಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸ್ಥಿತಿಯಲ್ಲಿ ಕಂಡುಬಂದಿವೆ.

ಇದನ್ನು ಗಮನಿಸಿದ ಕೂಡಲೇ ಗ್ರಾಮಸ್ಥರು ಆತಂಕಕ್ಕೀಡಾಗಿ ಪಶು ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪಶು ಇಲಾಖೆ ಪರಿವೀಕ್ಷಕ ರಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಜಾನುವಾರುಗಳಿಗೆ ಅಗತ್ಯ ಔಷಧೋಪಚಾರ ನೀಡಿದ್ದಾರೆ.

ವಿಷಪೂರಣ ಶಂಕೆ?:

ಜಾನುವಾರುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗ್ರಾಮದ ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದ್ದು ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇನ್ನು ಕೆಲವರು ಜಮೀನಿನಲ್ಲಿ ಬೆಳೆಗಳಿಗೆ ಸಿಂಪಡಿಸಿದ್ದ ಕ್ರಿಮಿನಾಶಕಯುಕ್ತ ಮೇವು ಸೇವಿಸಿ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಸಾವಿಗೀಡಾಗಿರುವ ಜಾನುವಾರುಗಳ ಮರಣೋತ್ತರ ಪರೀಕ್ಷೆಯ ವರದಿ ಹೊರಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದು ಬರಲಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 hour ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

9 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

13 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

13 hours ago