ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ.




ದೂರಿನಲ್ಲೇನಿದೆ…???

ನಾರಾಯಣ ಎಸ್. ಸಿ ರವರು ವ್ಯವಸಾಯ ಕೆಲಸದೊಂದಿಗೆ ಹುಂಬಾ ಗ್ರಾಮ ಪಂಚಾಯ್ತಿಯಲ್ಲಿ ಈಗ 1 ವರ್ಷದಿಂದ ನೀರಘಂಟಿ ಕೆಲಸ ಮಾಡಿಕೊಂಡಿದ್ದು, ಅಲ್ಲದೇ ಗ್ರಾಮ ಪಂಚಾಯ್ತಿಯ ಬೀದಿ ದೀಪಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸುವ ಕೆಲಸವನ್ನು ಮಾಡಿಕೊಂಡಿದ್ದು, ಗ್ರಾಮ ಪಂಚಾಯ್ತಿಯವರು. ಇದಕ್ಕೆ ಹಣವನ್ನು ಕೊಡುತ್ತಿದ್ದರು.

ದಿನಾಂಕ:13/09/2023 ರಂದು ಮಧ್ಯಾಹ್ನ 1-30 ಗಂಟೆಯ ಸಮಯದಲ್ಲಿ ರಾಘವೇಂದ್ರ ರವರು ಫೋನ್ ಮಾಡಿ ನಾರಾಯಣ ರವರು ಗ್ರಾಮ ಪಂಚಾಯ್ತಿಯ ವತಿಯಿಂದ ಹುಂಚಾದ ಆನೆಗದ್ದೆಯಲ್ಲಿ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳನ್ನು ಹಾಕುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ನಾನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಬೇಗ ಬನ್ನಿ ಎಂದಿದ್ದಾರೆ.




ಕೋಣಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾಗಿ ತಿಳಿಸಿರುತ್ತಾರೆ ಅಲ್ಲದೇ ನಂತರ ಶವವನ್ನು ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಬಂದು ಶವಾಗಾರದಲ್ಲಿರಿಸಿದ್ದಾರೆ.

ಈಗ್ಗೆ ಒಂದು ತಿಂಗಳ ಹಿಂದೆ ಹುಂಚಾ ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಸೇರಿಕೊಂಡು ಮೀಟಿಂಗ್ ಮಾಡಿ ಮಾವ ನಾರಾಯಣ ಹಾಗೂ ಅಟೆಂಡರ್ ಶ್ರೀಧರ್ ರವರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಬೀದಿ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳನ್ನು ಅಳವಡಿಸುವಂತೆ ಸೂಚನೆ ಮಾಡಿದ್ದು ಪ್ರತಿ ದಿವಸ ಬೀದಿ ದೀಪಗಳನ್ನು ಹಾಕುತ್ತಿದ್ದರು. ಅದೇ ರೀತಿ ಬುಧವಾರ ಬೆಳಿಗ್ಗೆ 10-30 ಗಂಟೆಯ ಸಮಯದಲ್ಲಿ ನಾರಾಯಣ ಎಸ್. ಸಿ ರವರು ಮನೆಯಿಂದ ಗ್ರಾಮ ಪಂಚಾಯ್ತಿಗೆ ಹೋದಾಗ ಅಲ್ಲಿನ ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಆನೆಗದ್ದೆ ಭಾಗಕ್ಕೆ ಬೀದಿ ದೀಪಗಳನ್ನು ಅಳವಡಿಸುವಂತೆ ತಿಳಿಸಿದ್ದರಿಂದ ನಾರಾಯಣ ಹಾಗೂ ಅಟೆಂಡರ್ ಶ್ರೀಧರ್ ರವರು ಕಬ್ಬಿಣದ ಏಣಿಯನ್ನು ತೆಗೆದುಕೊಂಡು ಆನೆಗದ್ದ ಏರಿಯಾದಲ್ಲಿ ಬೀದಿ ದೀಪಗಳನ್ನು ಅಳವಡಿಸುತ್ತಾ ಮಧ್ಯಾಹ್ನ 1-30 ಗಂಟೆಗೆ ಆನೆಗದ್ದೆ ಜಂಬಿ ರಸ್ತೆ ಹೊಸನೀರಿನ ಟ್ಯಾಂಕ್ ಹತ್ತಿರವಿರುವ ವಿದ್ಯುತ್ ಕಂಬಕ್ಕೆ 18 ಎತ್ತರದ ಏಣಿಯನ್ನು ಚಾಚಿಕೊಂಡಿದ್ದು, ಶ್ರೀಧರ್ ಏಣಿಯನ್ನು ಹಿಡಿದುಕೊಂಡಿದ್ದು ಕಬ್ಬಿಣದ ಏಣಿ ಮೂಲಕ ಮಾವ ನಾರಾಯಣ ರವರು ವಿದ್ಯುತ್ ದೀಪಗಳನ್ನು ಅಳವಡಿಸಲು ಏಣಿಯನ್ನು ಹತ್ತುತ್ತಿದ್ದಾಗ ಏಣಿ ವಾಲಿ ಎಲ್ ಟಿ ಲೈನ್ ಪಕ್ಕದಲ್ಲಿ ಹಾದು ಹೋದ ಪವಾರ್ ಲೈನ್ || ಕೆ.ಎ ವಿದ್ಯುತ್ ಲೈನ್ ಕೆಳಭಾಗದಲ್ಲಿದ್ದುದ್ದರಿಂದ ಆ ಲೈನ್ ಗೆ ಏಣಿ ತಾಗಿ ಏಣಿ ಮೇಲಿದ್ದ ನಾರಾಯಣರವರಿಗೆ ವಿದ್ಯುತ್ ತಗಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದು, ಕೆಳಗೆ ಏಣಿ, ಹಿಡಿದುಕೊಂಡಿದ್ದ ಶ್ರೀಧರ್ ರವರಿಗೆ ಕೈಗಳಿಗೆ ವಿದ್ಯುತ್ ತಗಲಿ ಸುಟ್ಟಿರುತ್ತೆ.


ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಯ ಚುನಾಯಿತ ಪ್ರತಿನಿಧಿಗಳು – ಮೀಟಿಂಗ್ ಮಾಡಿ ಫಿರಾದುದಾರರ ತಂದೆ ಹಾಗೂ ಶ್ರೀಧರ್ ರವರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಬೀದಿ ಬದಿಯ ವಿದ್ಯುತ್‌ ಕಂಬಗಳಿಗೆ ವಿದ್ಯುತ್ ದೀಪಗಳನ್ನು ಅಳವಡಿಸಲು ತಿಳಿಸಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದಿದ್ದರಿಂದ ವಿದ್ಯುತ್ ಕಂಬವನ್ನು ಕಬ್ಬಿಣದ ಏಣಿಯ ಮೂಲಕ ಹತ್ತಲು ಹೋಗಿ ವಿದ್ಯುತ್ ಶಾಖ್ ಆಗಿ ಕೆಳಗೆ ಬಿದ್ದು ಮೃತಪಟ್ಟಿರುತ್ತಾರೆ. ಶ್ರೀಧರ್ ರವರಿಗೆ ವಿದ್ಯುತ್ ಶಾಖ್ ಆಗಿ ಕೈಗಳಿಗೆ ಗಾಯವಾಗಿ ಚಿಕಿತ್ಸೆಯಲ್ಲಿರುತ್ತಾರೆ. ಯಾವುದೇ ಮುಂಜಾಗ್ರತಾ ಕ್ರಮ ವಹಿಸದೇ ನಿರ್ಲಕ್ಷತನ ತೋರಿ ನಾರಾಯಣ್ ರವರ ಸಾವಿಗೆ ಹಾಗೂ ಶ್ರೀಧರ್ ಕೈಗಳಿಗೆ ಗಾಯವಾಗಲು ಕಾರಣರಾದ ಹುಂಚಾ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವರ್ಗ ಹಾಗೂ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

4 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

8 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

10 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

13 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

13 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

1 day ago