ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ
ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ ಬದಲು ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತಿಳಿದ ಮಕ್ಕಳ ಪೋಷಕರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ತಿಳಿದ ಕೂಡಲೇ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಪಿ ಅವರು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ಬಿಇಒ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಆಗ ಮಕ್ಕಳ ಪೋಷಕರು ಶಿಕ್ಷಕಿಯನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಬಿಇಒ ಅವರು ನಿನ್ನೆಯೇ ಶಾಲಾ ಶಿಕ್ಷಕಿಯನ್ನು ಶಿವಮೊಗ್ಗದ ಗ್ರಾಮಾಂತರ ಭಾಗಕ್ಕೆ ವರ್ಗಾಯಿಸಿಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷಕಿ ಗದರಿದ ಕುರಿತು ಇಲಾಖೆಯಲ್ಲಿ ಸಮಿತಿ ರಚನೆ ಮಾಡಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಈಟಿವಿ ಭಾರತ ಜೊತೆ ದೂರವಾಣಿಯಲ್ಲಿ ಮಾತನಾಡಿದ ಬಿಇಒ ನಾಗರಾಜ್, ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ನನಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಶಾಲೆಗೆ ಭೇಟಿ ನೀಡಿ, ಅಲ್ಲಿನ ವಾಸ್ತವ ಸ್ಥಿತಿ ಪರಿಶೀಲಿಸಿದ್ದೇನೆ. ಶಿಕ್ಷಕಿಯ ಜೊತೆ ಮಾತನಾಡಿದ್ದು, ಅವರ ಹೇಳಿಕೆಯನ್ನು ಪಡೆದುಕೊಂಡಿದ್ದೇನೆ. ಅವರು ಕಳೆದ 9 ವರ್ಷಗಳಿಂದ ಇದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ವಿದ್ಯಾರ್ಥಿಗಳ ಹಾಗೂ ಪೋಷಕರ ಹೇಳಿಕೆ ಪಡೆದುಕೊಂಡು ಶಿಕ್ಷಕಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಈ ಶಾಲೆಗೆ ಬೇರೆ ಶಿಕ್ಷಕಿಯನ್ನು ನೇಮಕ ಮಾಡಲಾಗಿದೆ. ಈ ಘಟನೆ ಕುರಿತು ವಿಚಾರಿಸಲು ನಮ್ಮಲ್ಲಿಯೇ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್