January 11, 2026

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.




ನಡೆದಿದ್ದೇನು..???

ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು ಶುಕ್ರವಾರ ರಾತ್ರೋರಾತ್ರಿ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದಾರೆ.

ಸ್ಥಳೀಯ ಗ್ರಾಮಾಡಳಿತದ ಅನುಮತಿ ಪಡೆದು ಪ್ಲೆಕ್ಸ್ ಶುಕ್ರವಾರ ಅಳವಡಿಸಲಾಗಿತ್ತು ಆದರೆ ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ಪ್ಲೆಕ್ಸ್ ನ್ನು ಬ್ಲೇಡ್ ನಲ್ಲಿ ಹರಿದು ವಿಕೃತಿ ಮೆರೆದಿದ್ದಾರೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವ ಮೂಲಕ ಕಿಡಿಗೇಡಿಗಳನ್ನು ಬಂಧಿಸಬೇಕು ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಲಿದ್ದೇವೆ ಎಂದು ಸ್ಥಳೀಯ ಮುಖಂಡ ಪ್ರದೀಪ್ ಹೇಳಿದ್ದಾರೆ.

ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.







About The Author

Leave a Reply

Your email address will not be published. Required fields are marked *

Exit mobile version