ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.


ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ ಒಟ್ಟು 92.05 % ಫಲಿತಾಂಶ ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಈ ತಾಲೂಕಿನ ಮಕ್ಕಳು ವ್ಯಾಸಂಗದಲ್ಲಿ ಮುಂದೆ ಬರುತ್ತಿರುವುದಕ್ಕೆ ತಾಲೂಕಿನ ಶಿಕ್ಷಕರೇ ಕಾರಣರಾಗಿದ್ದು, ಮುಂದಿನ ದಿನದಲ್ಲಿ ಶೇಕಡಾ 100ಕ್ಕೆ 100 ಫಲಿತಾಂಶ ಬರುವಂತೆ ಮಾಡಿ ರಾಜ್ಯಕ್ಕೆ ಹೊಸನಗರ ತಾಲೂಕಿನ ಕೀರ್ತಿ ಬೆಳಗಿಸಬೇಕೆಂದು ಶಿಕ್ಷಕರಿಗೆ ಕರೆ ನೀಡಿದರು.

ಅಜ್ಞಾನವೆಂಬ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು ಪ್ರತಿಯೊಬ್ಬರೂ ಯಾವುದೇ ಪದವಿಗೆ ಹೋದರೂ ಗುರುಗಳ ಋಣವನ್ನು ಎಂದಿಗೂ ತೀರಸಲಾಗದು, ವಿದ್ಯೆಯ ಬುದ್ಧಿಯನ್ನು ಕಲಿಸುವ ಮತ್ತು ಜೀವನವನ್ನು ಸ್ಫೂರ್ತಿದಾಯಕವಾಗಿಸುವ ಶಿಕ್ಷಕರು ನಮ್ಮ ದೇಶದಲ್ಲಿ ರಾಜ್ಯದಲ್ಲಿ ಪ್ರತಿ ಜಿಲ್ಲೆ ತಾಲೂಕಿನಲ್ಲಿ ಇರುವುದೇ ನಮಗೆ ಹೆಮ್ಮೆ ಎಂದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೀತಿ ವಾತ್ಸಲ್ಯ ತುಂಬಿ ಪಾಠ ಮಾಡಬೇಕು. ಯಾವುದು ಒಳ್ಳೆಯದು. ಯಾವುದು ಕೆಟ್ಟದ್ದು ಎಂದು ಮನವರಿಕೆ ಮಾಡಿಕೊಡುವವರೇ ನಿಜವಾದ ಶಿಕ್ಷಕರು, ಸಮಾಜ ಹಾಗು ವಿದ್ಯಾರ್ಥಿಗಳು ಶಿಕ್ಷಕರನ್ನು ಉನ್ನತ ಸ್ಥಾನದಲ್ಲಿ ಇರಿಸಿ ಗೌರವಿಸುತ್ತಾರೆ. ಸಮಾಜದಲ್ಲಿ ಶಿಕ್ಷಕರುಗಳ ಸೇವೆ ಅತ್ಯುತ್ತಮವಾದ ಸೇವೆಯಾಗಿದ್ದು, ಬಲಿಷ್ಠ ರಾಷ್ಟ್ರದ ನಿರ್ಮಾಣ ಹಾಗೂ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದರು.

ಸಾಗರದ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಸಫ್ರಾಜ್ ಚಂದ್ರಗುತ್ತಿ ಶಿಕ್ಷಕರ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಂಗಸ್ವಾಮಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್. ಸುರೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇಂದ್ರಪ್ಪ, ರಾಜುಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

22 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

22 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

23 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago