ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು
ಶಿವಮೊಗ್ಗದದಲ್ಲಿ ತಹಶೀಲ್ದಾರ್ ಆಗಿರುವ ಎನ್ಜೆ ನಾಗರಾಜ್ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ ಏನಿದೆ ..??
ಸರ್ಕಾರದ ಆದೇಶ ಸಂಖ್ಯೆ:ಕಂಇ 45 ಎಎಸ್ಡಿ 2023, ಬೆಂಗಳೂರು ದಿನಾಂಕ:12.09.2023.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರವು ಶ್ರೀ ಎನ್.ಜೆ. ನಾಗರಾಜ, ಹಿಂದಿನ ತಹಶೀಲ್ದಾರ್ ಗ್ರೇಡ್-1 ಹೊಳಲ್ಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ (ಹಾಲಿ ತಹಶೀಲ್ದಾರ್ ಗ್ರೇಡ್-1, ಶಿವಮೊಗ್ಗ ತಾಲ್ಲೂಕು ರವರ ವಿರುದ್ಧ ದಾಖಲಾದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018)ರ ಕಲಂ 13(1)(29) & 13(2) ರನ್ವಯ ದಾಖಲಾದ ಕ್ರಿಮಿನಲ್ ಮೊಕದ್ದಮ ಸಂಖ್ಯೆ:11/2023ರಲ್ಲಿನ ಆರೋಪದ ಸಂಬಂಧ ಅವರ ವಿರುದ್ಧ ಇಲಾಖಾ ವಿಚಾರಣೆ/ತನಿಖೆಯನ್ನು ಬಾಕಿಯಿರಿಸಿ ಕರ್ನಾಟಕ ನಾಗರಿಕ ಸೇವಾ (ವ.ನಿ.&ಮೇ) ನಿಯಮಗಳು-1957ರ ನಿಯಮ-10(1)(ಎಎ) ರನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ/
ಮುಂದುವರೆದು, ಶ್ರೀ ಎನ್.ಜೆ. ನಾಗರಾಜ, ತಹಶೀಲ್ದಾರ್ ಗ್ರೇಡ್-1 ಇವರಿಗೆ ಅಮಾನತ್ತಿನ ಅವಧಿಯಲ್ಲಿ ಕ.ಸಿ.ಎಸ್.ಆರ್ ನಿಯಮ-98(1)(ಎ) ರನ್ವಯ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯುತ್ತಾರೆ .
ಸದರಿಯವರು ಸಕ್ಷಮ ಪ್ರಾಧಿಕಾರದ ಪೂರ್ವನುಮತಿಯಿಲ್ಲದ ಕೇಂದ್ರ ಸ್ನಾನವನ್ನು ಬಿಡತಕ್ಕದ್ದಲ್ಲ. ಸದರಿಯವರ ಲೀನ್ ಅನ್ನು ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿಗೆ ವರ್ಗಾಯಿಸಿದೆ.
ಏನಿದು ಪ್ರಕರಣ..??
ಸರ್ಕಾರ ನಾಗರಾಜ್ರವರ ವಿರುದ್ಧ ದಾಖಲಾದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018)ರ ಕಲಂ 13(1)(ಬಿ) & 13(2) ರನ್ನಯ ದಾಖಲಾದ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:11/2023ರಲ್ಲಿನ ಆರೋಪದ ಸಂಬಂಧ ಅವರ ವಿರುದ್ಧ ಇಲಾಖಾ ವಿಚಾರಣೆ/ ತನಿಖೆಯನ್ನು ಕಾಯ್ದಿರಿಸಿ, ಸದರಿಯವರನ್ನು ಸೇವೆಯಿಂದ ಅಮಾನತ್ತಿನಲ್ಲಿಡಲು ತೀರ್ಮಾನಿಸಿದೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆ ಲೋಕಾಯುಕ್ತ ಪೊಲೀಸರು ಕೋರ್ಟ್ ಅನುಮತಿ ಪಡೆದು ವಿವಿದೆಡೆ ರೇಡ್ ನಡೆಸಿದ್ದರು. ನಾಗರಾಜ್ರವರ ವಿರುದ್ಧವೂ ರೇಡ್ ನಡೆದಿತ್ತು. ಈ ವೇಳೆ ಶಿಕಾರಿಪುರ ಟೌನ್, ಶಿವಮೊಗ್ಗ , ಹೊಳಲ್ಕೆರೆ ಮತ್ತು ವಿವಿದೆಡೆ ದಾಳಿ ನಡೆದಿತ್ತು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಸಿದ ಬಗ್ಗೆ ಆರೋಪಿಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್