ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching
ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ.
ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ ಅವರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದ್ದಾನೆ.
ವಿಜಯಮ್ಮ ಅವರು ತಮ್ಮ ಶಕ್ತಿಯನ್ನು ಉಪಯೋಗಿಸಿ ಮಾಂಗಲ್ಯ ಸರ ರಕ್ಷಣೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದಾಗ ಅವರ ಕುತ್ತಿಗೆ ಮತ್ತು ಕೆನ್ನೆ ಭಾಗಕ್ಕೆ ಗಾಯವಾಗಿದೆ. ಕಳ್ಳರು ಕೊನೆಗೂ ಸುಮಾರು ಅಂದಾಜು 8 ಗ್ರಾಂ ಮಾಂಗಲ್ಯ ಸರದ ಒಂದು ತುಂಡು ಹರಿದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ.ವಿಜಯಮ್ಮ ಅವರ ಹೋರಾಟದ ಫಲವಾಗಿ 40 ಗ್ರಾಂ ಮಾಂಗಲ್ಯ ಸರದಲ್ಲಿ ಉಳಿದಿದೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…