ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ.
ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಗಣಿಮತ್ತು ಭೂ ವಿಜ್ಞಾನಕ್ಕೆ ಪತ್ರ ಬರೆದಿದ್ದಾರೆ. ಈಗ ಮರಳು ಮತ್ತು ಮರಳಿನ ರಾಯಲ್ಟಿಯನ್ನ ಕೊಡುವುದನ್ನ ನಿಲ್ಲಿಸಿದ್ದರಿಂದ ಈ ಪ್ರಕರಣ ಪ್ರಾಮುಖ್ಯತೆ ಪಡೆದಿದೆ.
ಮರಳು ತುಂಬಿದ ಟ್ರ್ಯಾಕ್ಟರ್ ನ್ನ ವಿನೋಬ ನಗರ ಪೊಲೀಸರು ವಶಕ್ಕೆ ಪಡೆದುಕೊಂಡು ಠಾಣೆಯ ಮುಂದೆ ನಿಲ್ಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನದಿಂದ ಬಂದ ವರದಿಯ ಆಧಾರದ ಮೇಲೆ ಕ್ರಮ ಜರುಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.