ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ ಎಂದು ಮಾಜಿ ಮಂತ್ರಿ ಹರತಾಳು ಹಾಲಪ್ಪ ಹೇಳಿದರು.
ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನಕ್ಕೆ ನೂರಾರು ವರ್ಷದ ಇತಿಹಾಸವಿದೆ, ಲಕ್ಷಾಂತರ ಜನ ಭಕ್ತಾದಿಗಳು ಈ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನವನ್ನು ಪಡೆದುಕೊಂಡು ಹೋಗುತ್ತಾರೆ, ಸಾವಿರಾರು ಜನರು ಒಳಿತನ್ನು ಕಂಡಿದ್ದಾರೆ,ಕಾಣುತ್ತಿದ್ದಾರೆ. ಈ ಒಂದು ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕೆಂಬ ಅಭಿಲಾಷೆಯನ್ನು ನಾನು ಹೊಂದಿದ್ದೆ. ದೇವರ ಮೇಲೆ ನಂಬಿಕೆ ಮತ್ತು ಧಾರ್ಮಿಕ ಆಚರಣೆಯು ಪ್ರತಿಯೊಬ್ಬರ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.
ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಾನು ಶಾಸಕನಾಗಿದ್ದು ನನ್ನ ಅಧಿಕಾರ ಅವಧಿಯಲ್ಲಿ ಈ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನವನ್ನು ಸಹ ನೀಡಿದ್ದೆ.ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸುವುದರೊಂದಿಗೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಈ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರದಿಂದ ಐದು ವರ್ಷದ ಅವಧಿಯಲ್ಲಿ ೧೦ ಕೋಟಿ ಅನುದಾನವನ್ನು ತರುವುದರೊಂದಿಗೆ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸುಮಾರು ೨೩ ಎಕರೆ ಜಾಗವಿದ್ದು. ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯೊಂದಿಗೆ ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು ಎಂದರು.
ಇದೇ ಸಂದರ್ಭದಲ್ಲಿ ಹರತಾಳು ಹಾಲಪ್ಪ ರವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಧರ್ಮದರ್ಶಿ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಬಿ.ಸ್ವಾಮಿರಾವ್, ಎಪಿಎಂಸಿ ಮಾಜಿ ನಿರ್ದೇಶಕ ಕಲ್ಯಾಣಪ್ಪಗೌಡ, ಪ್ರಧಾನ ಕಾರ್ಯದರ್ಶಿ ಸುದೀರ್ಭಟ್,ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಅಲವಳ್ಳಿ,ಮೆಣಸೆ ಆನಂದ್ ,
ಕೋಡೂರು ವಿಜೇಂದ್ರಭಟ್,ಹರೀಶ್ಗೌಡ,ಡಾಕಪ್ಪ ಬೆಳ್ಳೂರು,ರತ್ನಮ್ಮ,ತಿಮ್ಮಪ್ಪ,ಕೋಡೂರು ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಸದಸ್ಯ ಜಯಪ್ರಕಾಶಶೆಟ್ಟಿ,ಇನ್ನಿತರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್