ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು.

ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ ಹೇಳಿಕೆಯ ಮೇಲೆ ಎಫ್‌ಐಆರ್ ದಾಖಲಾಗಿದೆ. ಡಾ.ಸುಧೀಂದ್ರ, ಪಾ.ರಾ ಕೃಷ್ಣಮೂರ್ತಿ ಮತ್ತು ರಾಘವೇಂದ್ರ ಅವರ ನಾದನಿ ವಿನೋದರವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಘವೇಂದ್ರ ಕೇಕುಡರಿಗೆ, ಕೃಷ್ಣಮೂರ್ತಿ, ಮಂಜುನಾಥ, ರಾಮಕೃಷ್ಣ ಹಾಗೂ ಡಾ, ಸುಧೀಂದ್ರ ಎಂಬ ನಾಲ್ವರು ಸಹೋದರರಿದ್ದು ಇವರ ಪೈಕಿ ಮಂಜುನಾಥ ಈಗಾಗಲೇ ವಿಧಿವಶರಾಗಿದ್ದಾರೆ.

ಮಂಜುನಾಥ್ ಅವರ ಪತ್ನಿ ವಿನೋದ ಇವರಿಗೆ ಜಮೀನುಗಳಿಗೆ ಸಂಬಂಧಿಸಿದಂತೆ ಹಿಸ್ಸೆಯಾಗಿದ್ದು, ರಾಮಕೃಷ್ಣ ಕೇಕುಡ ಇವರು ಹಿಸ್ಸೆ ತೆಗೆದುಕೊಂಡು ಬೇರೆ ವಾಸವಾಗಿದ್ದರು ಎನ್ನಲಾಗಿದೆ.

ಉಳಿದ ಸಹೋದರರಾದ ಡಾ.ಸುಧೀಂದ್ರ, ಮತ್ತು ಪಾರಾ ಕೃಷ್ಣಮೂರ್ತಿ ರಾಘವೇಂದ್ರ ಕೇಕುಡರೊಂದಿಗೆ ಜಮೀನಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಿಪಿಎ ಮಾಡಿಕೊಂಡಿದ್ದರು.

ರಾಘವೇಂದ್ರ ಕೇಕುಡ ಜಮೀನಿನ ಅಭಿವೃದ್ಧಿಗಾಗಿ ಸಾಲ ಮಾಡಿದ್ದರು. ಇವರ ಎರಡನೇ ಸಹೋದರ ಮಂಜುನಾಥ್ ಅವರ ಪತ್ನಿ ವಿನೋದರವರಿಗೆ ಜಮೀನಿನ ಬಾಬ್ತಾಗಿ 10 ಲಕ್ಷ ರೂಪಾಯಿಗಳನ್ನು ರಾಘವೇಂದ್ರ ಕೇಕುಡರಿಂದ ಪಡೆದಿದ್ದು, ಪಡೆದ ಹಣದ ಬಗ್ಗೆ ಪತ್ರ ನೊಂದಣಿಯಾಗಿರಲಿಲ್ಲ.

ಸುಮಾರು 2 ವರ್ಷಗಳ ಹಿಂದಿನಿಂದಲೂ ಜಮೀನಿನ ಮೇಲೆ ಮಾಡಿದ ಸಾಲದ ವಿಚಾರದಲ್ಲಿ ಡಾ, ಸುದೀಂದ್ರ, ಪಾರಾ ಕೃಷ್ಣ ಮೂರ್ತಿ ಹಾಗೂ ಮಂಜುನಾಥ್ ಪತ್ನಿ ವಿನೋದ ರಾಘವೇಂದ್ರರ ಕುಟುಂಬಕ್ಕೆ ಹಲವಾರು ಬೈದು ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿ ಮಾನಸಿಕ ಹಿಂಸೆ ನೀಡಿದ್ದರು ಎನ್ನಲಾಗಿದೆ.

ಸಾಲ ತೀರಿಸದಿದ್ದರೆ ಮನೆ ಖಾಲಿ ಮಾಡುವಂತೆ ಬೆದರಿಸಿ ಮನೆ ಖಾಲಿ ಮಾಡದಿದ್ದರೆ ಶಿವಮೊಗ್ಗದಿಂದ ಗೂಂಡಾಗಳನ್ನು ಕರೆಸಿ ಮನೆಯಿಂದ ಹೊರ ಹಾಕಿಸುವುದಾಗಿ ಹಾಗೂ ಬ್ಯಾಂಕಿನ ಸಾಲವನ್ನು ಕಟ್ಟಬೇಕೆಂದು ಬೆದರಿಸಿದ್ದರು.

ಈ ವಿಚಾರದಲ್ಲಿ ರಾಘವೇಂದ್ರ ಕುಟುಂಬ ಅವರುಗಳ ಬೆದರಿಕೆಗೆ ಮನನೊಂದು ಮಾನಸಿಕ ಹಿಂಸೆ ತಡೆಯಲಾಗದೇ ದೇಹ ತ್ಯಾಗವಾಗಿರುತ್ತದೆ ಎಂದು ತೇಜ್ ಪ್ರಕಾಶ್ ದೂರಿನಲ್ಲಿ ದಾಖಲಿಸಿದ್ದಾರೆ.

ಅದ್ದರಿಂದ ರಾಘವೇಂದ್ರ ಕುಟುಂಬ ವರ್ಗದವರ ದುರ್ಮರಣಕ್ಕೆ ಕಾರಣರಾದ ಡಾ, ಸುದೀಂದ್ರ, ಪಾ.ರಾ ಕೃಷ್ಣಮೂರ್ತಿ, ವಿನೋದ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಸುಧೀಂದ್ರ ಶಿವಮೊಗ್ಗದ ಮೆಗ್ಗಾನ್ ನಲ್ಲಿ ವೈದ್ಯರಾಗಿದ್ದಾರೆ. ಪಾರಾ ಕೃಷ್ಣಮೂರ್ತಿ ಪ್ರಭಾವಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

2 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

2 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

12 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

20 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

21 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 day ago