ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ
ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು. ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ ಕಸವನ್ನು ರಸ್ತೆ ಬದಿಯಲ್ಲಿ ಹಾಕಲಾಗಿತ್ತು.
ಈ ವಿಚಾರದಲ್ಲಿ, ಅ.23 ರಂದು ಸಂಜೆ 6.00 ಗಂಟೆ ಸಮಯದಲ್ಲಿ, ಊರಿನ ದೇವಸ್ಥಾನದ ಬಳಿ ನಿಂತಿದ್ದಾಗ ಅಲ್ಲಿಗೆ ಬಂದ ಹೊಳೆಬೆನವಳ್ಳಿ ವಾಸಿ ಪ್ರಭಾಕರ ಬಿನ್ ಮಾಣಿಕ್ಯ, ಯುವರಾಜ್ ಬಿನ್ ಭೂಮಿನಾಥ ಮತ್ತು ಆತನ ಸಂಭಂಧಿಕ ಪುರಲೆ ವಾಸಿ ಚಿನ್ನು ಎಂಬುವವರು ಏಕಾಏಕಿಯಾಗಿ ಬಂದು ಹಲ್ಲೆ ನಡೆಸಿದ್ದಾರೆ.
ಊರಿನಲ್ಲಿ ಹಾಕಿರುವ ಕಸವನ್ನು ತೆಗೆದು ಹಾಕಿಲ್ಲ ಎಂದು ಅವಾಚ್ಯವಾಗಿ ಬೈದು ಕೈಯಿಂದ ಹೊಡೆದು ಹಲ್ಲೆ ಮಾಡಿ, ನಂತರ ಪ್ರಭಾಕರನು ಹಿಂಬದಿಯಿಂದ ಬಂದು ಮಚ್ಚಿನಿಂದ ಪಿರ್ಯಾದಿಯ ಎಡಕಿವಿಗೆ ಹಲ್ಲೆ ಮಾಡಿದ್ದು, ಆತನ ಜೊತೆಗಿದ್ದ ಯುವರಾಜ್ ಮತ್ತು ಚಿನ್ನುರವರು ಸಹ ಕೈಯಿಂದ ಹಲ್ಲೆ ಮಾಡಿರುವುದಾಗಿ ಅಧ್ಯಕ್ಷ ಜಗದೀಶ್ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್