Breaking
14 Jan 2026, Wed

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ

“ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ.

ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ಅತ್ಯಂತ ಬೇಸರದ ಬ್ಯಾನರ್ ಹಾಕಲಾಗಿದೆ.

ಅನೇಕ ಪ್ರಾಣಿ ಪ್ರೀಯರು ತಮ್ಮ ಮನೆಯಲ್ಲಿ ನಾಯಿಗಳನ್ನು ಸಾಕುತ್ತಾರೆ. ಆದರೆ ಮರಿಗಳು ಬೇಡ ಎಂಬ ನಿರ್ಧಾರಕ್ಕೆ ಬಂದಿರುತ್ತಾರೆ. ಅಪ್ಪಿತಪ್ಪಿ ಸಾಕು ನಾಯಿ ಮರಿಗಳಿಗೆ ಜನ್ಮ ನೀಡಿದರೆ ಮರಿಗಳನ್ನು ಬೀದಿಯಲ್ಲಿ ಬಿಟ್ಟು ಹೋಗುತ್ತಿರುವ ಘಟನೆ ಅನೇಕ ಪ್ರಾಣಿ ಪ್ರೀಯರ ಅಸಮಾಧಾನಕ್ಕೆ ಕಾರಣವಾಗಿದೆ. 

ಮನೆಯಲ್ಲಿ ಹೆಣ್ಣು ಸಾಕು ನಾಯಿ ಇದ್ದರೆ ಅದು ಮರಿ ಹಾಕದಂತೆ ಶಸ್ತಚಿಕಿತ್ಸೆ ಮಾಡಿಸಬಹುದು ಎಂಬುದು ಅನೇಕರಿಗೆ ತಿಳಿಯದ ವಿಚಾರವಾಗಿರುವುದು ಬೇಸರದ ಸಂಗತಿಯಾಗಿದೆ.ಈ ಹಿನ್ನಲೆಯಲ್ಲಿ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸವನ್ನು ಅನಾಮಧೇಯರು ಈ ತರಹದ ಬ್ಯಾನರ್ ಅಳವಡಿಸಿ ಎಚ್ಚರಿಸುತಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *