Breaking
12 Jan 2026, Mon

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು. 

ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ.

ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ ಸಂಧರ್ಭದಲ್ಲಿ ಅವರ ಸ್ನೇಹಿತರ ಬಳಗ ಹಿಂದುತ್ವದ ಕಿಡಿ ವಿನಾಯಕ್ ಶೆಟ್ಟಿ ಅಮರ್ ಹೇ,ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯೊಂದಿಗೆ ಪಾರ್ಥೀವ ಶರೀರದ ಮೇಲೆ ಕೇಸರಿ ವಸ್ತ್ರ ಹಾಕಿ ಗೌರವ ಸಲ್ಲಿಸಿದರು. ಈ ಸನ್ನಿವೇಶ ನೆರೆದಿದ್ದವರ ಕಣ್ಣಾಳಿಗಳನ್ನು ತೇವಗೊಳಿಸಿತ್ತು.

ಆ ನಂತರ ಪಾರ್ಥೀವ ಶರೀರದ ಮೆರವಣಿಗೆ ಬಾಳೂರು ಗ್ರಾಮದ ಹಿಂದೂ ರುಧ್ರಭೂಮಿಯವರೆಗೂ ಸಾಗಿತು.ಈ ಸಂಧರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತು.

ಬಂಟರ ಸಂಪ್ರದಾಯದಂತೆ ಅಂತ್ಯಸಂಸ್ಕಾರ: 

ಸಂಜೆ 7 ಗಂಟೆಗೆ ಪಾರ್ಥಿವ ಶರೀರ ಬಾಳೂರು ಗ್ರಾಮದ ಹಿಂದೂ ರುಧ್ರಭೂಮಿಗೆ ತಲುಪಿತು.ಬಂಟರ ಸಂಪ್ರದಾಯಂತೆ ಸಹೋದರ ವಿಕ್ರಮ್ ಶೆಟ್ಟಿ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ವಿನಾಯಕ್ ಶೆಟ್ಟಿ ಪಂಚಭೂತಗಳಲ್ಲಿ ಲೀನರಾದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *