ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು

ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ. 

ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ. ಇನ್ನೊಂದೆಡೆ ನಿಯಂತ್ರಣಕ್ಕೆ ಸಿಗದ ಬೈಕ್​ ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಮೇಘರಾಜ್​ಗೆ ಗಂಭೀರ ಗಾಯವಾಗಿ ಅಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ  ಪಾದಚಾರಿ ಹನುಮಂತಪ್ಪ ಆಸ್ಪತ್ರೆಗೆ ಸಾಗುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಕುಂಸಿ ಪೊಲೀಸ್ ಠಾಣ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಿನ್ನೆ ರಾತ್ರಿ ಮೇಘರಾಜ್ ಎಂಬ 28 ವರ್ಷದ ಯುವಕ ಶಿವಮೊಗ್ಗದಿಂದ ಶಿರಾಳಕೊಪ್ಪದ ಮಂಚಿನಕೊಪ್ಪಕ್ಕೆ ಬೈಕ್ ನಲ್ಲಿ ಹೋಗುವಾಗ ಎದುರಿನಿಂದ ನಡೆದುಕೊಂಡು ಹೋಗುತ್ತಿದ್ದ ಹನುಮಂತಪ್ಪ ಎಂಬುವರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಮೇಘರಾಜ್ ವಿದ್ಯುತ್ ಕಂಬಕ್ಕೆ ಗುದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಶಿಕಾರಿಪುರ ತಾಲೂಕಿನ ಕೆಂಗಟ್ಟೆ ನಿವಾಸಿ ಹನುಮಂತಪ್ಪ (35)  ಸುತ್ತುಕೋಟೆಯಲ್ಲಿ ಹಬ್ಬದ ಪ್ರಯುಕ್ತ, ಸಂಬಂಧೀಕರ ಮನೆಗೆ ಬಂದಿದ್ದ ಇವರು ರಾತ್ರಿ ರಸ್ರೆಯ ಬದಿ ನಡೆದು ಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಹನುಮಂತಪ್ಪರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಶಿವಮೊಗ್ಗದ ಹೊನ್ನಾಪುರದಲ್ಲಿ ನೆಲೆಸಿದ್ದ ಮಂಚಿಕೊಪ್ಪದ ಮೇಘರಾಜ್ ಸ್ನೇಹಿತರೊಂದಿಗೆ ಬೆಳಿಗ್ಗೆ ಸಕ್ರೆಬೈಲಿಗೆ ತೆರಳಿಗೆ ಅಲ್ಲಿ ಫೋಟೊಕ್ಲಿಕ್ಕಿಸಿಕೊಂಡು ರಾತ್ರಿಯ ವೇಳೆಗೆ ಚೋರಡಿ ಮೂಲಕ ಶಿಕಾರಿಪುರಕ್ಕೆ ತೆರಳುವಾಗ ಈ ಘಟನೆ ನಡೆದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

5 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

17 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

19 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago