Breaking
14 Jan 2026, Wed

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ
ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು.

ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ  ಆಯೋಜಿಸಲಾಗಿದ್ದ  ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು ನೈತಿಕ. ಮೌಲ್ಯಗಳು ಬಳೆಗಳಂತೆ ಪ್ರತಿಯೋರ್ವರಿಗೂ ಧರ್ಮಪಥವು ಸುಕೃತ ಫಲ ನೀಡುವಂತೆ ಚೈತನ್ಯದಾಯಕವಾಗಿದೆ ಎಂದರು.

ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತ ಬಳೆಗಳಿಂದ ಅಲಂಕರಿಸಿದ ಅಭೀಷ್ಠವರ ಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯವರಿಗೆ ಆಗಮೋಕ್ತ ಶಾಸ್ತçದನ್ವಯ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು. ಅಷ್ಟವಿಧಾರ್ಚನೆ ಪೂಜೆಯ ಬಳಿಕ ಫಲ-ಪುಷ್ಪಗಳನ್ನು ಸಮರ್ಪಿಸಿ ಭಕ್ತವೃಂದದವರು ಜಿನನಾಮ ಸ್ತೋತ್ರಗಳನ್ನು ಪಠಿಸಿದರು.

ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಕ್ಷೇತ್ರಪಾಲ ಸ್ವಾಮಿ ಸನ್ನಿಧಿಯಲ್ಲಿ ಪೂರ್ವ ಪದ್ಧತಿಯಂತೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳು  ನೆರವೇರಿದವು.

ನವರಾತ್ರಿ ಪೂಜೆ, ಸಂಗೀತ ಕಾರ್ಯಕ್ರದಲ್ಲಿ ದೇಶದ ಹಾಗೂ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡಿದ್ದರು. ಸೇವಾಕರ್ತೃರಾದ ಬೆಂಗಳೂರಿನ ಶ್ರೀಮತಿ ಚೂಡಾಮಣಿ ಶ್ರೀ ರವಿರಾಜ್ ಜೈನ್‌ರವರನ್ನು  ಶ್ರೀಗಳವರು ಹರಸಿದರು. ಪುರೋಹಿತ ಪದ್ಮರಾಜ ಇಂದ್ರರವರು ಪೂಜಾ ವಿಧಿ ನೆರವೇರಿಸಿದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *