ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ


ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು


ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. 

ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ  “ಕಮಿಷನರ್​ ಮಾಮಾ ದಯವಿಟ್ಟು ನಾಯಿಗಳನ್ನು ಹಿಡಿಸಿ” ಎಂದು ಅಂಗಲಾಚಿ ವಿಡಿಯೋ ಮಾಡಿದ್ದಾನೆ. ಸಾಗರ ನಗರಸಭೆ ವ್ಯಾಪ್ತಿಯ 25ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ.  

KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ – ಚಾಲಕ ಮಾಡಿದ್ದೇನು ಗೊತ್ತಾ..???

ಶಿವಮೊಗ್ಗ ; KSRTC ಬಸ್ಸಿನಲ್ಲಿ ಟಿಕೆಟ್‌ ಖರೀದಿಸುವಂತೆ ತಿಳಿಸಿದ ಕಂಡಕ್ಟರ್‌, ನೆರವಿಗೆ ಧಾವಿಸಿದ ಸಹ ಪ್ರಯಾಣಿಕರ ಮೇಲೆ ಯುವಕರ ಗುಂಪು ಹಲ್ಲೆಗೆ ಮುಂದಾಗಿದೆ. ತಕ್ಷಣ ಚಾಲಕ ಬಸ್ಸನ್ನು ಹೊಳೆಹೊನ್ನೂರು ಠಾಣೆ ಎದುರಿಗೆ ತಂದು ನಿಲ್ಲಿಸಿದ್ದು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿಗೆ ಚನ್ನಗಿರಿ ತಾಲೂಕು ಮಾವಿನಕಟ್ಟೆ ಬಳಿ ಯುವಕನೊಬ್ಬ ಹತ್ತಿದ್ದ. ಆದರೆ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಟರ್‌ ಜೊತೆಗೆ ವಾಗ್ವಾದ ನಡೆಸಿದ್ದ. ಅಲ್ಲದೆ ಹಲ್ಲೆಗು ಮುಂದಾಗಿದ್ದಾನೆ. ಸಹ ಪ್ರಯಾಣಿಕರೊಬ್ಬರು ಇದರ ವಿಡಿಯೋ ಮಾಡಿಕೊಳ್ಳಲು ಮುಂದಾಗಿದ್ದು ಅವರ ಮೊಬೈಲ್‌ ಕಸಿದುಕೊಳ್ಳಲು ಯತ್ನಿಸಿದ್ದಾನೆ.

ಯುವಕ ಫೋನ್‌ ಮಾಡಿ ತಿಳಿಸಿದ್ದರಿಂದ ಮತ್ತಿಬ್ಬರು ಯುವಕರು ಅರಹತೊಳಲು ಬಳಿ ಬಸ್‌ ಹತ್ತಿಕೊಂಡಿದ್ದಾರೆ. ಅವರು ಕೂಡ ಕಂಡಕ್ಟರ್‌ ಮತ್ತು ಸಹ ಪ್ರಯಾಣಿಕರ ಜೊತೆಗೆ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಯಾಣಿಕರು, ಕಂಡಕ್ಟರ್‌ ಬಳಿ ಇದ್ದ ಮೊಬೈಲ್‌, ಹಣ ಕಸಿದುಕೊಂಡಿದ್ದರು ಎಂದು ಆಪಾದಿಸಲಾಗಿದೆ.

ಎಲ್ಲಿಯು ಬಸ್‌ ನಿಲ್ಲಿಸದಂತೆ ಯುವಕರು ಡ್ರೈವರ್‌ಗೆ ತಾಕೀತು ಮಾಡಿದ್ದರು. ಆದರೆ ಸಮಯ ಪ್ರಜ್ಞೆ ಮೆರೆದ ಚಾಲಕ ಹೊಳೆಹೊನ್ನೂರು ಪೊಲೀಸ್‌ ಠಾಣೆ ಎದುರಿಗೆ ತಂದು ನಿಲ್ಲಿಸಿದ್ದಾರೆ. ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದರು. ಸಹ ಪ್ರಯಾಣಿಕರಿಂದ ಕಸಿದುಕೊಂಡಿದ್ದ ಮೊಬೈಲ್‌, ಹಣವನ್ನು ಪೊಲೀಸರು ಮರಳಿ ಕೊಡಿಸಿದ್ದಾರೆ ಎನ್ನಲಾಗುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 hour ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

18 hours ago