ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ


ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು


ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. 

ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ  “ಕಮಿಷನರ್​ ಮಾಮಾ ದಯವಿಟ್ಟು ನಾಯಿಗಳನ್ನು ಹಿಡಿಸಿ” ಎಂದು ಅಂಗಲಾಚಿ ವಿಡಿಯೋ ಮಾಡಿದ್ದಾನೆ. ಸಾಗರ ನಗರಸಭೆ ವ್ಯಾಪ್ತಿಯ 25ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ.  

KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ – ಚಾಲಕ ಮಾಡಿದ್ದೇನು ಗೊತ್ತಾ..???

ಶಿವಮೊಗ್ಗ ; KSRTC ಬಸ್ಸಿನಲ್ಲಿ ಟಿಕೆಟ್‌ ಖರೀದಿಸುವಂತೆ ತಿಳಿಸಿದ ಕಂಡಕ್ಟರ್‌, ನೆರವಿಗೆ ಧಾವಿಸಿದ ಸಹ ಪ್ರಯಾಣಿಕರ ಮೇಲೆ ಯುವಕರ ಗುಂಪು ಹಲ್ಲೆಗೆ ಮುಂದಾಗಿದೆ. ತಕ್ಷಣ ಚಾಲಕ ಬಸ್ಸನ್ನು ಹೊಳೆಹೊನ್ನೂರು ಠಾಣೆ ಎದುರಿಗೆ ತಂದು ನಿಲ್ಲಿಸಿದ್ದು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿಗೆ ಚನ್ನಗಿರಿ ತಾಲೂಕು ಮಾವಿನಕಟ್ಟೆ ಬಳಿ ಯುವಕನೊಬ್ಬ ಹತ್ತಿದ್ದ. ಆದರೆ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಟರ್‌ ಜೊತೆಗೆ ವಾಗ್ವಾದ ನಡೆಸಿದ್ದ. ಅಲ್ಲದೆ ಹಲ್ಲೆಗು ಮುಂದಾಗಿದ್ದಾನೆ. ಸಹ ಪ್ರಯಾಣಿಕರೊಬ್ಬರು ಇದರ ವಿಡಿಯೋ ಮಾಡಿಕೊಳ್ಳಲು ಮುಂದಾಗಿದ್ದು ಅವರ ಮೊಬೈಲ್‌ ಕಸಿದುಕೊಳ್ಳಲು ಯತ್ನಿಸಿದ್ದಾನೆ.

ಯುವಕ ಫೋನ್‌ ಮಾಡಿ ತಿಳಿಸಿದ್ದರಿಂದ ಮತ್ತಿಬ್ಬರು ಯುವಕರು ಅರಹತೊಳಲು ಬಳಿ ಬಸ್‌ ಹತ್ತಿಕೊಂಡಿದ್ದಾರೆ. ಅವರು ಕೂಡ ಕಂಡಕ್ಟರ್‌ ಮತ್ತು ಸಹ ಪ್ರಯಾಣಿಕರ ಜೊತೆಗೆ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಯಾಣಿಕರು, ಕಂಡಕ್ಟರ್‌ ಬಳಿ ಇದ್ದ ಮೊಬೈಲ್‌, ಹಣ ಕಸಿದುಕೊಂಡಿದ್ದರು ಎಂದು ಆಪಾದಿಸಲಾಗಿದೆ.

ಎಲ್ಲಿಯು ಬಸ್‌ ನಿಲ್ಲಿಸದಂತೆ ಯುವಕರು ಡ್ರೈವರ್‌ಗೆ ತಾಕೀತು ಮಾಡಿದ್ದರು. ಆದರೆ ಸಮಯ ಪ್ರಜ್ಞೆ ಮೆರೆದ ಚಾಲಕ ಹೊಳೆಹೊನ್ನೂರು ಪೊಲೀಸ್‌ ಠಾಣೆ ಎದುರಿಗೆ ತಂದು ನಿಲ್ಲಿಸಿದ್ದಾರೆ. ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದರು. ಸಹ ಪ್ರಯಾಣಿಕರಿಂದ ಕಸಿದುಕೊಂಡಿದ್ದ ಮೊಬೈಲ್‌, ಹಣವನ್ನು ಪೊಲೀಸರು ಮರಳಿ ಕೊಡಿಸಿದ್ದಾರೆ ಎನ್ನಲಾಗುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

11 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

13 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

13 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

13 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

23 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 days ago