ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ……………
ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ
ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು.

ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ ಮಲೆನಾಡಿನ ರೈತರ ಪಾಲಿಗೆ ಸಡಗರ ಸಂಭ್ರಮದ ಹಬ್ಬವಾಗಿದ್ದು ಇದೊಂದು ವಿಶಿಷ್ಟ ಹಬ್ಬವಾಗಿದೆ. ಹಬ್ಬದ ಹಿಂದಿನ ದಿನ ಸಂಜೆ ಜಮೀನಿನಲ್ಲಿ ಆಡಿಕೆ ತೋಟದಲ್ಲಿ ಬಾಳೆ ಕಂಬ ಕಬ್ಬಿನಸುಳಿ ಮಾವಿನ ಎಲೆಗಳ ತಳಿರು ತೋರಣಗಳಿಂದ ಶೃಂಗರಿಸಿ ಭತ್ತದ ಗದ್ದೆಯಲ್ಲಿ ಪಂಚಪಾAಡವರAತೆ ಐದು ಬುಡಗಳನ್ನು ಬಿಳಿ ಹಸಿರು ಕೆಂಪು ಕಪ್ಪು ಹಳದಿ ಬಣ್ಣದ ಬಟ್ಟೆಯಿಂದ ಅಲಂಕರಿಸಿ ರಾತ್ರಿಯಿಡಿ ಮಡಿಯಿಂದ ಮಹಿಳೆಯರು ಭೂಮಿ ತಾಯಿಗೆ ಬಗೆಬಗೆಯ ಅಡುಗೆಗಳನ್ನು ಸಿದ್ದಪಡಿಸಿ ಪೂಜಾ ಸಾಮಾಗ್ರಿಗಳೊಂದಿಗೆ ಚಿತ್ತಾರದ ಭೂಮಣ್ಣಿ
ಬುಟ್ಟಿಯಲ್ಲಿ ತುಂಬಿ ಮನೆಯ ಯಜಮಾನ ನಸುಕಿನಲ್ಲಿಯೇ ಹೊತ್ತುಕೊಂಡು ಮನೆಮಂದಿಯಲ್ಲ ಹೋಗುತ್ತಾರೆ.

ಹಿಂದಿನ ದಿನ ಸಿದ್ದಪಡಿಸಿದ ಜಾಗದಲ್ಲಿ ಶುದ್ದಮಾಡಿ ಪೂಜೆಗೆ ಅಣಿಯಾಗುತ್ತಾರೆ ಭೂಮಿಯಲ್ಲಿನ ಫರಿಗೆ ತಾಳಿಸರ ಬಂಗಾರದ ಒಡವೆಗಳನ್ನು ತೊಡಿಸಿ ಬಳೆಬಿಚ್ಚಾಲೆಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ರಾತ್ರಿಯಿಡಿ ನಿದ್ರಬಿಟ್ಟು ತಯಾರಿಎಲಾದ ಬಗೆಬಗೆಯ ಭಕ್ಷö್ಯಗಳನ್ನು ಕುಡಿಬಾಳೆ ಎಲೆಯ ಮೇಲೆ ಬಡಿಸಿ ನೈವೇದ್ಯಮಾಡಿ ಕುಟುಂಬದವರು ಜಮೀನಿನಲ್ಲಿಯೇ ಊಟಮಾಡಿ ಬರುವುದು ಪದ್ದತಿ.ನಂತರ ಬೆರಕೆ ಸೋಪ್ಪು ಮತ್ತು ಇನ್ನಿತರ ಅಹಾರ ಪದಾರ್ಥಗಳನ್ನು ಪ್ರತ್ಯಕ ಪಾತ್ರೆಗೆ ಹಾಕಿ ಚರಗಚಲ್ಲುವುದು ಎನ್ನುವಂತೆ ಆಚ್ಚಂಬಲಿ…………!  ಅಳಿಯಂಬಲಿ……………..ಹಿತ್ತಲಲ್ಲಿರುವ ದಾರೆಹಿರೇಕಾಯಿ .ಮುಚ್ಚಿಕೊಂಡು ತಿನ್ನೇ ಭೂಮಿ ತಾಯಿ ಹೂಯ್……………!ಎಂದು ಕೂಗುತ್ತಾ ತಮ್ಮ ಜಮೀನಿನ ಸುತ್ತ ಬೀರುವುದು ಸಂಪ್ರದಾಯ ಆನಂತರ ಇಲಿ ಹೆಗ್ಗಣಗಳಿಂದ ಬೆಳೆ ರಕ್ಷಣೆಗಾಗಿ ಈ ಹಬ್ಬದಲ್ಲಿ ಇಲಿ ಹೆಗ್ಗಣಗಳಿಗೆ ವಿಶೇಷ ಸ್ಥಾನವನ್ನು ನೀಡುವುದರೊಂದಿಗೆ ಆವುಗಳಿಗೂ ಪ್ರತ್ಯಕ ಎಡೆಯನ್ನು ಇಟ್ಟು ನೈವೇದ್ಯ ಮಾಡಿ ದೂರದಲ್ಲಿ ಇಡುತ್ತಾರೆ.

ಒಟ್ಟಾರೆಯಾಗಿ ಇಂದು ಮಲೆನಾಡಿನ ರೈತರು ಬರದ ಕಾರ್ಮೋಡದಲ್ಲಿಯೂ ಹಬ್ಬವನ್ನು ಶ್ರದ್ದಾಭಕ್ತಿಯಿಂದ ನೆರವೇರಿಸುವ ಮೂಲಕ ಸಂಭ್ರಮಸಿದರು.
ಹೊಸನಗರ ತಾಲೂಕಿನ ವಿವಿದೆಡೆ ಹೊಸಳ್ಳಿ ಜಾಗದ್ದೇ ಇಂದ್ರಮ್ಮ ಚಂದ್ರಶೇಕರ್, ಅಲವಲ್ಲಿ ವೀರೇಶ್, ಬೆಲ್ಲಿಸರ ಸುಮಾ ಕೃಷ್ಣಮೂರ್ತಿ ,ಕುಟುಂಬದವರು ಮತ್ತು ರಿಪ್ಪನಪೇಟೆ, ಕುಕ್ಕಳಲೇ, ಆಲವಳ್ಳಿ, ಬೆಳ್ಳಿಸರ ಹೀಗೆ ಹಲವು ಕಡೆ ರೈತಬಾಂದವರು ಭೂಮಿಹುಣ್ಣಿಮೆ ಹಬ್ಬವನ್ನು ಸಡಗರದಿಂದ ಆಚರಿಸಿ ಸುಖ-ಸಮೃದ್ಧಿ ನೀಡುವಂತೆ ಪ್ರಾರ್ಥಿಸಿ, ಪೂಜೆ ಸಲ್ಲಿಸಿದರು.

ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಸಮಸ್ತ ರೈತ ಕುಲಕ್ಕೆ ಭೂಮಿ ಹುಣ್ಣಿಮೆ ಹಬ್ಬದ ಶುಭ ಹಾರೈಕೆಗಳೊಂದಿಗೆ, ಭೂತಾಯಿ ಸಮೃದ್ಧ ಬೆಳೆಯನ್ನು ಸಂತೃಪ್ತಿಯಿಂದಿಡಲೆಂದು ಪ್ರಾರ್ಥಿಸುತ್ತೇವೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

14 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

22 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

2 days ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

2 days ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

2 days ago